ಸಿಎಂ ಸ್ವಾಭಿಮಾನಿ ಸಮಾವೇಶ ಬಳಿಕ ಖರ್ಗೆ ಭೇಟಿ ಮಾಡಿದ ಬೋಸರಾಜು

Public TV
1 Min Read

ರಾಯಚೂರು: ರಾಯಚೂರು (Raichuru) ಜಿಲ್ಲೆಯ ಮಾನ್ವಿಯಲ್ಲಿ ನಡೆದ ಸಿಎಂ ಸ್ವಾಭಿಮಾನಿ ಸಮಾವೇಶ ಬಳಿಕ ಖರ್ಗೆಯವರನ್ನು ಸಚಿವ ಎನ್.ಎಸ್.ಬೋಸರಾಜು (NS Bosaraju) ಭೇಟಿ ಮಾಡಿದರು.

ಮುಡಾ ಪ್ರಕರಣದಲ್ಲಿ (MUDA Scam) ಬಿಜೆಪಿ (BJP), ಜೆಡಿಎಸ್ (JDS) ಆರೋಪಗಳಿಗೆ ಉತ್ತರ ನೀಡಬೇಕೆಂದೇ ಮಾನ್ವಿಯಲ್ಲಿ (Manvi) ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬೆಂಬಲಿಗರು ಆಯೋಜಿಸಿದ್ದ ಸಮಾವೇಶದಲ್ಲಿ ಎನ್.ಎಸ್.ಬೋಸರಾಜು ಮಾತನಾಡಿದರು. ಬಳಿಕ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು (Mallikarjun Kharge) ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.ಇದನ್ನೂ ಓದಿ:

ಸಿಎಂ ಸಿದ್ದರಾಮಯ್ಯಗೆ ಬೆಂಬಲ ಸೂಚಿಸಲು ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದ ಮೂಲಕ ವಿರೋಧ ಪಕ್ಷದ ನಾಯಕರಿಗೆ ಸಿಎಂ ಬೆಂಬಲಿಗರು ಠಕ್ಕರ್ ಕೊಟ್ಟರು. ಸಿದ್ದರಾಮಯ್ಯ ಜೊತೆ ನಾವೆಲ್ಲ ಇದ್ದೀವಿ ಎಂದು ಹೇಳಿ ಸಂದೇಶ ರವಾನಿಸಿದರು. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಭಾವನಾತ್ಮಕವಾಗಿ ಹೇಳಿದರು.

ಬೃಹತ್ ಸಮಾವೇಶ ಬಳಿಕ ಮಲ್ಲಿಕಾರ್ಜುನ ಖರ್ಗೆಯನ್ನು ಬೆಂಗಳೂರಿನ ಖರ್ಗೆ ನಿವಾಸದಲ್ಲಿ ಭೇಟಿಯಾದರು. ಭೇಟಿ ಮಾಡಿ ಉಭಯ ಕುಶಲೋಪರಿಯನ್ನು ವಿಚಾರಿಸಿದರು. ಪಕ್ಷದ ಕಾರ್ಯ ಚಟುವಟಿಕೆಗಳು ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.ಇದನ್ನೂ ಓದಿ:

Share This Article