ವಿಪಕ್ಷ ನಾಯಕನ ಆಯ್ಕೆಗೆ ಸೋಮವಾರ ರಾಜ್ಯಕ್ಕೆ ಬರಲಿದ್ದಾರೆ ವೀಕ್ಷಕರು

Public TV
1 Min Read

ನವದೆಹಲಿ: ಸೋಮವಾರದಿಂದ ವಿಧಾನಮಂಡಲ (Karnataka Assembly Session) ಅಧಿವೇಶನ ಶುರುವಾಗುತ್ತಿದ್ದರೂ ಬಿಜೆಪಿ (BJP) ಈವರೆಗೂ ವಿಪಕ್ಷ ನಾಯಕನನ್ನು (Opposition Leader) ಆಯ್ಕೆ ಮಾಡಲು ಆಗಿಲ್ಲ. ಯಾರನ್ನು ಆಯ್ಕೆ ಮಾಡಿದರೆ ಚೆನ್ನಾಗಿರುತ್ತದೆ ಎಂಬ ಬಗ್ಗೆ ಎಂಬ ಬಗ್ಗೆ ಯಡಿಯೂರಪ್ಪ (Yediyurappa) ಅವರಿಂದ ಅಭಿಪ್ರಾಯ ಸಂಗ್ರಹಿಸಿದೆ.

ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ  ಜೊತೆ ಸಭೆ ನಡೆದ ಬಳಿಕ ಮಾತನಾಡಿದ ಯಡಿಯೂರಪ್ಪ, ಸೋಮವಾರ ಕೇಂದ್ರದ ವೀಕ್ಷಕರಾಗಿ ವಿನೋದ್ ತಾವ್ಡೆ ಮತ್ತು ಮನ್ಸುಖ್ ಮಂಡವಿಯಾ ಇಬ್ಬರು ಬರುತ್ತಿದ್ದಾರೆ. ಅವರು ರಾಜ್ಯ ಬಿಜೆಪಿ ಶಾಸಕರಿಂದ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಆಯ್ಕೆಯ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಉದ್ಧವ್‌ 1 ನಿರ್ಧಾರದಿಂದ ಮಹಾರಾಷ್ಟ್ರದಲ್ಲಿ ಬಂತು ಟ್ರಿಪಲ್‌ ಎಂಜಿನ್‌ ಸರ್ಕಾರ – ವಿಪಕ್ಷ ನಾಯಕ ಈಗ ಡಿಸಿಎಂ!

 

ವೀಕ್ಷಕರು ಕೇಂದ್ರ ನಾಯಕರಿಗೆ ವರದಿ ನೀಡಿದ ಬಳಿಕ ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕ ಮಾಡಲಾಗುತ್ತದೆ. ನಾಳೆ ಅಧಿವೇಶನಕ್ಕೆ ಮುನ್ನ ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಇಲ್ಲ. ಸದ್ಯ ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಅಗತ್ಯ ಬಿದ್ದರೆ ಎರಡು ದಿನಗಳ ಬಳಿಕ ಮತ್ತೆ ಕರೆಯುತ್ತೇವೆ ಎಂದು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್