ವಿಧಾನಸೌಧ ಉಪ ಸಭಾಧ್ಯಕ್ಷರ ಕೊಠಡಿಯಲ್ಲಿ ಭರ್ಜರಿ ಬಾಡೂಟ

Public TV
1 Min Read

ಬೆಂಗಳೂರು: ಸದಾ ವಿವಾದಗಳಿಗೆ ಹೆಸರು ಮಾಡಿರೋ ವಿಧಾನಸೌಧ ಈಗ ಮತ್ತೊಂದು ವಿವಾದ ಸೃಷ್ಟಿ ಮಾಡಿದೆ. ಉಪ ಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಕೊಠಡಿಯನ್ನ ದುರ್ಬಳಕೆ ಮಾಡಿಕೊಂಡಿರೋ ವಿಧಾನಸಭೆ ಸಿಬ್ಬಂದಿ ಮಧ್ಯಾಹ್ನ ಭರ್ಜರಿ ಬಾಡೂಟ ಮಾಡಿ ಬೇಜಾಬ್ದಾರಿ ಮೆರೆದಿದ್ದಾರೆ.

ಇತ್ತೀಚೆಗೆ ಕರ್ನಾಟಕ ವಿಧಾನ ಮಂಡಲ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕರ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಅನಂತ್ ಟೀಂ ಗೆಲುವು ಸಾಧಿಸಿತ್ತು. ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಸಿಬ್ಬಂದಿಗೆ ಖುದ್ದು ಅನಂತ್ ಬಾಡೂಟ ಆಯೋಜನೆ ಮಾಡಿದ್ದಾರೆ ಎನ್ನಲಾಗ್ತಿದೆ. ಚಿಕನ್, ಮಟನ್, ಕಬಾಬ್, ಮೊಟ್ಟೆ ಸೇರಿ ಭರ್ಜರಿ ಬಾಡೂಟ ಮಾಡಿರೋ ಸಿಬ್ಬಂದಿ ಉಪ ಸಭಾಧ್ಯಕ್ಷರ ಕೊಠಡಿಯನ್ನೆ ದುರುಪಯೋಗ ಮಾಡಿಕೊಂಡಿದ್ದಾರೆ.

ಉಪ ಸಭಾಧ್ಯಕ್ಷರು ಇಲ್ಲದ ಸಮಯದಲ್ಲಿ ಸಿಬ್ಬಂದಿ ಹೋಟೆಲಿನಿಂದ ಬಾಡೂಟ ತರಿಸಿಕೊಂಡು ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಉಪ ಸಭಾಧ್ಯಕ್ಷರ ಕೊಠಡಿಯಲ್ಲಿ ಬಾಡೂಟ ಮಾಡಿರುವುದು ಚರ್ಚೆಗೆ ಗ್ರಾಸವಾಗಿದ್ದು, ಉಪ ಸಭಾಧ್ಯಕ್ಷರು ಸಿಬ್ಬಂದಿ ಮೇಲೆ ಏನು ಕ್ರಮ ತೆಗೆದುಕೊಳ್ತಾರೆ ಕಾದು ನೋಡಬೇಕಿದೆ.

Share This Article
Leave a Comment

Leave a Reply

Your email address will not be published. Required fields are marked *