ಸಚಿವ ಜಾರ್ಜ್ ಕ್ಷೇತ್ರದಲ್ಲಿ ಟ್ರಸ್ಟ್ ಸ್ಥಳವನ್ನು ಸರ್ಕಾರಿ ಜಾಗವನ್ನಾಗಿ ಮಾಡಲು ಮುಂದಾದ ಅಧಿಕಾರಿಗಳು!

Public TV
1 Min Read

ಬೆಂಗಳೂರು: ಮಠದ ಜಾಗವನ್ನು ಹೊಡೆಯಲು ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಪ್ರಯತ್ನಿಸಿದ್ದಾಯ್ತು. ಇದೀಗ ಸಚಿವ ಕೆಜೆ ಜಾರ್ಜ್ ಕ್ಷೇತ್ರದಲ್ಲಿ ಬರುವ ಶ್ರೀರಾಮ ಮಂದಿರದ ಟ್ರಸ್ಟ್ ಗೆ ಸೇರಿದ ಜಾಗವನ್ನು ಸರ್ಕಾರಿ ಜಾಗವನ್ನಾಗಿ ಮಾಡಲು ಅಧಿಕಾರಿಗಳು ಮುಂದಾಗಿರೋದು ಬೆಳಕಿಗೆ ಬಂದಿದೆ.

ಬೆಂಗಳೂರಿನ ಕಾಚರಕನಹಳ್ಳಿಯಲ್ಲಿರುವ ರಾಮಮಂದಿರದ ಸುತ್ತಮುತ್ತಲಿನ ಜಾಗ ಶ್ರೀರಾಮ ಚೈತನ್ಯ ವರ್ಧಿನಿ ಟ್ರಸ್ಟ್ ಗೆ ಸೇರಿದ್ದು ಅಂತ ಕೋರ್ಟ್ ಆದೇಶಿಸಿದೆ. ಆದ್ರೆ ಈ ಜಾಗ ಸರ್ಕಾರದ್ದು ಅಂತ ತಹಶೀಲ್ದಾರ್ ಮತ್ತು ಅಧಿಕಾರಿಗಳು ತಡೆಗೋಡೆ ನಿರ್ಮಿಸಲು ಮುಂದಾಗಿದ್ದಾರೆ.

ಈ ಕುರಿತು ಆದೇಶ ಎಲ್ಲಿದೆ ಅಂತ ಪ್ರಶ್ನಿಸಿದ್ರೆ ನಮಗೆ ಮೇಲಿಂದ ಒತ್ತಡ ಇದೆ ಅಂತ ಹೇಳುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ದೇವಸ್ಥಾನದ ಟ್ರಸ್ಟಿಗಳು ಮತ್ತು ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಚಿವ ಕೆಜೆ ಜಾರ್ಜ್ ಅವರೇ ಪರೋಕ್ಷವಾಗಿ ಒತ್ತಡ ಹೇರಿ ತಡೆಗೋಡೆ ನಿರ್ಮಿಸಲು ಸೂಚಿಸಿದ್ದಾರೆ ಅಂತ ಟ್ರಸ್ಟಿಗಳು ಆರೋಪಿಸಿದ್ದಾರೆ.

ಈ ಬಗ್ಗೆ ಅಪರ ಜಿಲ್ಲಾಧಿಕಾರಿಗಳನ್ನು ಕೇಳಿದ್ರೆ ನಮಗೆ ಯಾರ ಒತ್ತಡವೂ ಇಲ್ಲ ಅಂತ ಹೇಳುತ್ತಿದ್ದಾರೆ. ಆದ್ರೆ ದಾಖಲೆಗಳನ್ನು ಕೇಳಿದ್ರೆ ಮಾತ್ರ ತೋರಿಸಲು ಮುಂದಾಗುತ್ತಿಲ್ಲ.

Share This Article
Leave a Comment

Leave a Reply

Your email address will not be published. Required fields are marked *