ಹಣಕ್ಕೆ ಹೆಣ್ಣು: ಗುಜ್ಜರ್ ಕೀ ಶಾದಿಯನ್ನು ನಿಲ್ಲಿಸಿದ ಅಧಿಕಾರಿಗಳು

Public TV
1 Min Read

ಕಲಬುರಗಿ: ಜಿಲ್ಲೆಯಲ್ಲಿ ಮತ್ತೊಂದು ಗುಜ್ಜರ್ ಕೀ ಶಾದಿ ಪ್ರಕರಣ ಬೆಳಕಿಗೆ ಬಂದಿದೆ. ಮಕ್ಕಳ ಸಹಾಯವಾಣಿ ಕೇಂದ್ರ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ತಂಡದವರು ಬಂದು ದಾಳಿ ನಡೆಸಿ ಮದುವೆಯನ್ನು ತಪ್ಪಿಸಿದ್ದಾರೆ.

ಚಿತ್ತಾಪೂರ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಗುಜರಾತ್ ಮೂಲದ ಜಾಮ್‍ನಗರ ನಿವಾಸಿ 22 ವರ್ಷದ ಜಿತೇಂದ್ರ ಜೊತೆ 16 ವರ್ಷದ ಬಾಲಕಿಯ ಮದುವೆಗೆ ಸಿದ್ಧತೆ ನಡೆದಿತ್ತು. ಈ ವಿಚಾರ ತಿಳಿದು ವಿವಿಧ ಇಲಾಖೆಯ ಅಧಿಕಾರಿಗಳು ಬಂದು ದಾಳಿ ನಡೆಸಿ ಶಾದಿಯನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತಾಗಿ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಈ ರೀತಿಯ ಮದುವೆಯಾಗುವುದು ಹೊಸದೆನಲ್ಲ ಈ ಹಿಂದೆಯೂ ನಡೆದಿತ್ತು. ಬಡ ಕುಟುಂಬಗಳಿಗೆ ಹಣದ ಆಸೆಯನ್ನು ತೋರಿಸಿ ಅವರ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮದುವೆಯಾಗುವ ದಂಧೆ ಜಿಲ್ಲೆಯಲ್ಲಿ ಕೆಲ ವರ್ಷಗಳಿಂದ ನಡೆದುಕೊಂಡು ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *