ಹಣೆಗೆ ಗುಂಡು ಹಾರಿಸಿಕೊಂಡು 71 ವರ್ಷದ ವೃದ್ಧ ಸಾವು

Public TV
1 Min Read

ಹಾಸನ: ಹಣೆಗೆ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದಲ್ಲಿ ನಡೆದಿದೆ.

ಬಸವಲಿಂಗಪ್ಪ(71) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಮೃತದೇಹದ ಪಕ್ಕದಲ್ಲೇ ಬಂದೂಕು ಬಿದ್ದಿದೆ. ಮನೆಯ ಮೆಟ್ಟಿಲ ಮೇಲೆ ಮೃತದೇಹ ಬಿದ್ದಿದ್ದು, ತಲೆಯ ಭಾಗ ಛಿದ್ರವಾಗಿದೆ.

ಕೆಲವು ವರ್ಷಗಳಿಂದ ಬಸವಲಿಂಗಪ್ಪ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮೃತನ ಪತ್ನಿ ಹಾಗೂ ಪುತ್ರ ವಿದೇಶದಲ್ಲಿ ನೆಲೆಸಿದ್ದರು. ಆದರೆ ಆತ್ಮಹತ್ಯಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಆರಕ್ಷಕ ವೃತ್ತ ನಿರೀಕ್ಷಕ ಚೈತನ್ಯ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಿಂದಗಿ, ಹಾನಗಲ್‍ಗೆ ಇಂದು ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *