ದಾವಣಗೆರೆ: ಸಿಎಂ ಕುಮಾರಸ್ವಾಮಿ ಅವರು ಸ್ಥಳಕ್ಕೆ ಬಂದು ಪರಿಹಾರ ನೀಡುವವರೆಗೂ ಜಿಲ್ಲಾಧಿಕಾರಿ ಕಚೇರಿ ಬಿಟ್ಟು ಹೋಗಲ್ಲ ಎಂದು ವೃದ್ಧೆ ಪಟ್ಟು ಹಿಡಿದು ಕುಳಿತ ಘಟನೆ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ಹರಿಹರ ತಾಲೂಕಿನ ಬುಳ್ಳಾಪುರ ಗ್ರಾಮದ ರತ್ನಮ್ಮ ಎಂಬ ವೃದ್ಧೆ ಸಿಎಂ ಅವರು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದು ಕುಳಿತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ಗೋಮಾಳ ಜಾಗದಲ್ಲಿ ನಿರ್ಮಿಸಿಕೊಂಡಿದ್ದ ವೃದ್ದೆಯ ಮನೆಯನ್ನು ತೆರವು ಮಾಡಲಾಗಿತ್ತು. ದಾವಣಗೆರೆ ಜಿಲ್ಲಾಧಿಕಾರಿಗಳ ಆದೇಶದಂತೆ ಗೋಮಾಳ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ಅಧಿಕಾರಿಗಳು ತೆರವು ಮಾಡಿದ್ದರು.
ಇದರಿಂದ ಮನೆ ಕಳೆದುಕೊಂಡ ವೃದ್ಧೆ, ಹಲವು ದಿನಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ಪರಿಹಾರಕ್ಕಾಗಿ ಅಲೆದಾಡಿದ್ದಾರೆ. ತನಗೆ ಮನೆ ಬೇಕು ಎಂದು ಕಚೇರಿಗೆ ಅಲೆದಾಡಿ ವೃದ್ಧೆ ಬೇಸತ್ತಿದ್ದರು. ಆದ್ದರಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕುಳಿತು ಸಿಎಂ ಕುಮಾರಸ್ವಾಮಿಯವರು ಬರಲಿ, ನನ್ನ ಸಮಸ್ಯೆಗೆ ಪರಿಹಾರ ನೀಡಲಿ. ಸಿಎಂ ಬರುವವರೆಗೂ ನಾನು ಹೋಗಲ್ಲ ಅಂತ ಗೋಳಾಡಿದ್ದಾರೆ. ಕೊನೆಗೆ ಕಚೇರಿಯಲ್ಲಿದ್ದ ಅಧಿಕಾರಿಗಳು ವೃದ್ಧೆಯ ಮನ ಓಲೈಸಿ ಕಳುಹಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv