ಆಗಸ್ಟ್ 2ರಂದು ವಿಧಾನಸೌಧಕ್ಕೆ ಮುತ್ತಿಗೆ: ವಾಟಾಳ್

Public TV
1 Min Read

ಬೆಂಗಳೂರು: ಉತ್ತರ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಸಭೆ ನಡೆಸುವಂತೆ ಆಗ್ರಹಿಸಿ ಆಗಸ್ಟ್ 2ರಂದು ವಿಧಾನಸಭೆಗೆ ಮುತ್ತಿಗೆ ಹಾಕುವುದಾಗಿ ಕನ್ನಡ ಒಕ್ಕೂಟ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಪ್ರತ್ಯೇಕ ರಾಜ್ಯ ಕುರಿತು ಪ್ರತಿಕ್ರಿಯಿಸಿದ ಅವರು, ಇದೇ ಆಗಸ್ಟ್ 2ರಂದು ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ವಿಶೇಷ ಸಭೆ ನಡೆಸುವಂತೆ ಆಗ್ರಹಿಸಿ ಕನ್ನಡ ಒಕ್ಕೂಟದಿಂದ ವಿಧಾನಸಭೆಗೆ ಮುತ್ತಿಗೆ ಹಾಕಲಾಗುವುದು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುತ್ತಿರುವವನ್ನು ಖುದ್ದು ಭೇಟಿ ಮಾಡಿ ಹೋರಾಟ ಕೈಬಿಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಸರ್ಕಾರ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಕುಮಾರಸ್ವಾಮಿಯವರು ಹುಬ್ಬಳ್ಳಿ ಭಾಗಕ್ಕೆ ಹೋಗಿ ಹಾದಿ ಬೀದಿಯಲ್ಲಿ ಚರ್ಚೆ ಮಾಡೋದಲ್ಲ. ಉತ್ತರ ಕರ್ನಾಟಕಕ್ಕೆ ವಿಶೇಷ ಅಧಿವೇಶನ ನಡೆಸಿ, ಸಮಸ್ಯೆಯ ಬಗ್ಗೆ ವಿಸ್ತೃತ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Share This Article
Leave a Comment

Leave a Reply

Your email address will not be published. Required fields are marked *