ಮೋದಿಯಿಂದ ದೇಶ ವಿಭಜನೆ, ಬಿಎಸ್‍ವೈಯಿಂದ ರಾಜ್ಯ ವಿಭಜನೆ: ಆನಂದ್ ಅಸ್ನೋಟಿಕರ್

Public TV
1 Min Read

ಕಾರವಾರ: ಯುವಕರನ್ನು ಬಳಸಿ ಹಿಂದುತ್ವದ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಯಡಿಯೂರಪ್ಪನವರು ಕರ್ನಾಟಕವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಿಡಿಕಾರಿದ್ದಾರೆ.

ಪ್ರತ್ಯೇಕ ರಾಜ್ಯ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಖ್ಯಾತಿಯನ್ನು ಸಹಿಸಲಾಗದೇ ಯಡಿಯೂರಪ್ಪನವರು ಹಾಗೂ ಬಿಜೆಪಿಯವರು ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವ ಕುರಿತು ರೈತರನ್ನು ಬಲಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಬಡ ರೈತರನ್ನು, ಯುವಕರನ್ನು ಬಳಸಿ ಹಿಂದುತ್ವದ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಯಡಿಯೂರಪ್ಪನವರು ಕರ್ನಾಟಕವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸ್ನೋಟಿಕರ್ ದೂರಿದರು.

ಯಡಿಯೂರಪ್ಪನವರು ಮುಖ್ಯಮಂತ್ರಿ ಆಗುವ ಸಾಧ್ಯತೆಗಳಿಲ್ಲ, ಕೇಂದ್ರದಲ್ಲಿ ಮಂತ್ರಿಯಾಗುತ್ತೇನೆ ಎನ್ನುವ ಉದ್ದೇಶವಿಟ್ಟುಕೊಂಡು ಹೀಗೆ ಮಾಡುತ್ತಿದ್ದಾರೆ. ಇವರ ಮೇಲಿರುವ ಕೇಸುಗಳನ್ನು ಮುಗಿಸಿಕೊಳ್ಳಬೇಕಿದೆ ಹೀಗಾಗಿ ಈ ರೀತಿ ಮಾಡುತ್ತಿದ್ದಾರೆ. ಇದೊಂದು ಪೊಲಿಟಿಕಲ್ ಗೇಮ್. ಮುಂಬರುವ ಲೋಕಸಭಾ ಚುನಾವಣೆಯೇ ಮುಖ್ಯ ಉದ್ದೇಶ ಎಂದು ತಿಳಿಸಿದರು.

ಅಮಿತ್ ಶಾ ರವರಿಗೆ ಕರ್ನಾಟಕದಲ್ಲಿ ತಾನೇನೋ ಮಾಡುತ ದ್ದೇನೆ ಎಂದು ತೋರಿಸಿಕೊಳ್ಳಲು ಯಡಿಯೂರಪ್ಪನವರು ಹೀಗೆ ಮಾಡುತ್ತಿದ್ದಾರೆ. ಅವರು ಇನ್ನು ಮುಂದೆ ರಾಜ್ಯದ ಮುಖ್ಯಮಂತ್ರಿಯಾಗುವುದಿಲ್ಲ. ಕುಮಾರಸ್ವಾಮಿಯವರ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತದೆ. ತಾವು ವಿರೋಧ ಪಕ್ಷದಲ್ಲಿದ್ದು ರಾಜ್ಯಕ್ಕಾಗಿ ಒಳ್ಳೆಯ ಹೋರಾಟ ಮಾಡಿ ಎಂದು ಯಡಿಯೂರಪ್ಪನವರಿಗೆ ಸಲಹೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *