ನ.2ರಂದು ನವಕರ್ನಾಟಕ ಪರಿವರ್ತನಾ ರ್ಯಾಲಿಗೆ ಮೋದಿ, ಶಾ ಚಾಲನೆ- ಬಿಜೆಪಿಯವರಿಂದ ಇಂದು ಭೂಮಿ ಪೂಜೆ

Public TV
1 Min Read

ಬೆಂಗಳೂರು: ನಗರದಲ್ಲಿ ನವ ಕರ್ನಾಟಕ ಪರಿವರ್ತನಾ ರ್ಯಾಲಿಗೆ ಸಿದ್ಧವಾಗುತ್ತಿರೋ ವೇದಿಕೆಗೆ ಇಂದು ಬಿಜೆಪಿ ನಾಯಕರು ಭೂಮಿ ಪೂಜೆ ನೆರವೇರಿಸಿದ್ದಾರೆ.

ನವೆಂಬರ್ 2 ರಂದು ನೆಲಮಂಗಲದ ಅಂತರ್ ರಾಷ್ಟ್ರೀಯ ವಸ್ತು ಪ್ರದರ್ಶನ ಆವರಣದಲ್ಲಿ ನವ ಕರ್ನಾಟಕ ಪರಿವರ್ತನಾ ಜಾಥಾಗೆ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಇದೀಗ ಸಿದ್ಧವಾಗುತ್ತಿರುವ ವೇದಿಕೆಗೆ ಇಂದು ಭೂಮಿ ಪೂಜೆ ನೆರವೇರಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಂದು ಬೆಂಗಳೂರಿಗೆ ಆಗಮಿಸಲಿದ್ದು, ನವಕರ್ನಾಟಕ ಜಾಥಾಗೆ ಚಾಲನೆ ನೀಡಲಿದ್ದಾರೆ.

ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮಾತನಾಡಿ, ನವ ಪರಿವರ್ತನಯಾತ್ರೆ ಕಾರ್ಯಕ್ರಮದ ಉದ್ಘಾಟನಾ ಸ್ಥಳದಲ್ಲಿ ಭೂಮಿ ಪೂಜೆ ಮಾಡಿದ್ದೇವೆ. ರಾಜ್ಯದಲ್ಲಿ ಸರ್ಕಾರ ಬದಲಾವಣೆ ಮಾಡುವ ಕಾರ್ಯಕ್ರಮ ಇದು. ಸಿದ್ದರಾಮಯ್ಯ ಸರ್ಕಾರ ಹಲವು ವಿಚಾರಗಳಲ್ಲಿ ವಿಫಲವಾಗಿದೆ. ಕಮಿಷನ್ ಪಡೆಯುವುದರಲ್ಲಿ ನಿಸ್ಸೀಮರಾಗಿದ್ದಾರೆ. ಒಡೆದು ಆಳುವ ರಾಜಕಾರಣ ಮಾಡಲು ಸಿಎಂ ಮುಂದಾಗಿದ್ದಾರೆ. ಹೊಸ ರಾಜ್ಯ ಕಟ್ಟುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯ ಮಾಡಲಿದೆ. ನಾವು ಯಾವುದೇ ಒಂದು ವರ್ಗ, ಜಾತಿ ಪರ ಅಲ್ಲ ಅಂತ ತಿಳಿಸಿದ್ದಾರೆ.

ಪರಿವರ್ತನೆ ಮಾಡುವುದು ಅಂದ್ರೆ ಪ್ಯಾಚ್ ವರ್ಕ್ ಮಾಡುವ ಕಾರ್ಯಕ್ರಮವಲ್ಲ. ಸಂಪೂರ್ಣ ಬದಲಾವಣೆಯೇ ಇದರ ಉದ್ದೇಶ. ಹೊಸದೊಂದು ರಾಜಕಾರಣದ ಪರ್ವ ನಿರ್ಮಿಸಲು ಮುಂದಾಗಿದ್ದೇವೆ. ಯಡಿಯೂರಪ್ಪ ನೇತೃತ್ವದಲ್ಲಿ ಎಲ್ಲರೂ ಒಂದಾಗಿ ಭಾಗವಹಿಸಲಿದ್ದಾರೆಂದು ಮುರಳೀಧರ್ ಹೇಳಿದರು.

ಭೂಮಿ ಪೂಜೆಯಲ್ಲಿ ಕೇಂದ್ರ ಸಚಿವ ಡಿವಿ ಸದಾನಂದಗೌಡ, ಸಂಸದೆ ಶೋಭಾ ಕರಂದ್ಲಾಜೆ, ಆರ್ ಅಶೋಕ್, ಪರಿಷತ್ ಸದಸ್ಯ ಸೋಮಣ್ಣ, ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *