ಕೇತುಗ್ರಸ್ಥ ಸೂರ್ಯ ಗ್ರಹಣ – ಅ. 25ರಂದು ಶ್ರೀ ಕ್ಷೇತ್ರ ಘಾಟಿ ದೇವಾಲಯ ಬಂದ್

Public TV
1 Min Read

ಚಿಕ್ಕಬಳ್ಳಾಪುರ: ಅಕ್ಟೋಬರ್ 25ರ ಮಂಗಳವಾರ ಸಂಭವಿಸುವ ಕೇತು ಗ್ರಸ್ತ ಸೂರ್ಯಗ್ರಹಣ (Solar Eclipse) ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಶ್ರೀ ಕ್ಷೇತ್ರ ಘಾಟಿಸುಬ್ರಮಣ್ಯಸ್ವಾಮಿ ದೇವಾಲಯವನ್ನು (GhatiSubramanyaswamy Temple) ಬಂದ್ (Bandh) ಮಾಡಲಾಗುತ್ತಿದೆ.

ಈ ಕುರಿತಂತೆ ದೇವಾಲಯ ಕಾರ್ಯ ನಿರ್ವಾಹಕಾಧಿಕಾರಿ ಪ್ರಕಟಣೆ ನೀಡಿದ್ದು, ಅಕ್ಟೋಬರ್ 25ರ ಮಂಗಳವಾರ ಸಂಭವಿಸುವ ಕೇತು ಗ್ರಸ್ತ ಸೂರ್ಯಗ್ರಹಣ ಹಿನ್ನಲೆ ಶ್ರೀ ಘಾಟಿಸುಬ್ರಮಣ್ಯಸ್ವಾಮಿ ದರ್ಶನಕ್ಕೆ ಬೆಳಗ್ಗೆ 10:30 ರವರೆಗೆ ಮಾತ್ರ ಅವಕಾಶ ನೀಡಲಾಗಿದ್ದು, ತದನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಇದನ್ನೂ ಓದಿ: ಬಾರ್ ಗಲಾಟೆಯಲ್ಲಿ ಪ್ರಭಾವಿ ವ್ಯಕ್ತಿಯ ಮಗನಿಂದ ಹಲ್ಲೆಗೊಳಗಾದ ಯುವಕ ಸಾವು

ಗ್ರಹಣದ ನಂತರ ರಾತ್ರಿ 7.45ಕ್ಕೆ ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. ಅಂದು ಬೆಳಗ್ಗೆ 6:30ಕ್ಕೆ ಅಭಿಷೇಕ ಪ್ರಾರಂಭವಾಗುತ್ತದೆ ಹಾಗೂ ಮಹಾಮಂಗಳಾರತಿಯನ್ನು ಬೆಳಗ್ಗೆ 08:00 ಕ್ಕೆ ನೆರವೇರಿಸಲಾಗುತ್ತದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ – ಬಳ್ಳಾರಿಯಲ್ಲಿ ರಾಹುಲ್ ಮತದಾನ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *