ಅಯೋಧ್ಯೆಯಲ್ಲಿ ಮೋದಿ ದೀಪಾವಳಿ- ರಾಮ ಮಂದಿರ ಕಾಮಗಾರಿ ಪರಿಶೀಲನೆ

Public TV
2 Min Read

ನವದೆಹಲಿ: ಬೆಳಕಿನ ಹಬ್ಬ ಅಂದ್ರೆ ಅದು ದೀಪಾವಳಿ (Deepavali). ಈ ದೀಪಾವಳಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶಿಷ್ಟವಾಗಿ ಆಚರಿಸುತ್ತಿದ್ದಾರೆ. ಅದರಂತೆ ಇಂದು ರಾಮ ಜನ್ಮಭೂಮಿ ಅಯೋಧ್ಯೆ (Ayodhya) ಗೆ ಭೇಟಿ ನೀಡುತ್ತಿದ್ದು, ಬೆಳಕಿನ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ.

ಹೌದು. ಪ್ರತಿ ವರ್ಷದಂತೆ ಪ್ರಧಾನಿ ನರೇಂದ್ರ ಮೋದಿ ನಾಳೆ ದೇಶದ ಸೈನಿಕರ ಜೊತೆಗೆ ದೀಪಾವಳಿಯನ್ನು ಆಚರಿಸಲಿದ್ದಾರೆ. ಆದರೆ ಅದಕ್ಕೂ ಮುನ್ನ ಇಂದು ಅಯೋಧ್ಯೆಯಲ್ಲಿ ಬೆಳಕಿನ ಹಬ್ಬಕ್ಕೆ ಚಾಲನೆ ನೀಡುತ್ತಿದ್ದಾರೆ. ಅಲ್ಲಿ ನಡೆಯುವ ದಾಖಲೆಯ ದೀಪೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಅಯೋಧ್ಯೆಯಲ್ಲಿ ವಿಶೇಷವಾಗಿ ದೀಪಾವಳಿಯನ್ನು ಉತ್ತರ ಪ್ರದೇಶ (Uttar Pradesh) ಸರ್ಕಾರ ಆಚರಿಸುತ್ತಿದೆ. ಸರಯೂ ನದಿ ನಟದಲ್ಲಿ 15 ಲಕ್ಷ ದೀಪಗಳನ್ನು ಹಚ್ಚುವ ಮೂಲಕ ಹೊಸ ಗಿನ್ನಿಸ್ ದಾಖಲೆ ಸೃಷ್ಟಿ ಮಾಡಲಾಗುತ್ತಿದೆ. ಈಗಾಗಲೇ ಗಿನ್ನಿಸ್ ರೆಕಾರ್ಡ್ ತಂಡ ಅಯೋಧ್ಯೆ ತಲುಪಿದ್ದು, ಹಣತೆಗಳ ಎಣಿಕೆ ಶುರು ಮಾಡಿದೆ. ಇಂದು ಸಂಜೆ ಈ ಎಲ್ಲ ದೀಪಗಳು ಬೆಳಗಲಿದ್ದು, ಬಳಿಕ ಅಯೋಧ್ಯೆಯಲ್ಲಿ ಹೊಸ ದಾಖಲೆ ಸೃಷ್ಟಿಯಾಲಿದೆ. ಇಂಥ ಅದ್ಭುತ ದೀಪೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಕ್ಷಿಯಾಗುತ್ತಿದ್ದಾರೆ.

ಇಂದು ಸಂಜೆ 5 ಗಂಟೆಗೆ ಉತ್ತರ ಪ್ರದೇಶದ ಅಯೋಧ್ಯಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಸಂಜೆ 5.45ಕ್ಕೆ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ರಾಮ ಮಂದಿರ ನಿರ್ಮಾಣಾ ಕಾರ್ಯ ವೀಕ್ಷಿಸಿ, ಶ್ರೀರಾಮ ಕಥಾ ಪಾರ್ಕ್‍ನಲ್ಲಿ ಶ್ರೀರಾಮನಿಗೆ ಜರುಗಲಿರುವ ಸಾಂಕೇತಿಕ ರಾಜ್ಯಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 6.30ಕ್ಕೆ ಸರಯೂ ನದಿ ತೀರದ ಮಹಾ ಆರತಿಯಲ್ಲಿ ಪಾಲ್ಗೊಂಡು, ರಾಮ್ ಕಿ ಪೌಡಿಯಲ್ಲಿ ನಡೆಯಲಿರುವ 3-ಡಿ ‘ಹೊಲೊಗ್ರಾಫಿಕ್ ಪ್ರೊಜೆಕ್ಷನ್ ಮ್ಯಾಪಿಂಗ್ ಶೋ’ ಮತ್ತು ಮ್ಯೂಸಿಕಲ್ ಲೇಸರ್ ಶೋಗೆ ಸಾಕ್ಷಿಯಾಗಲಿದ್ದಾರೆ.

ಇನ್ನು ಇದೇ ವೇಳೆ ರಾಮಲಲ್ಲಾಗೆ ಸಂಬಂಧಿಸಿದ 11 ವಿವಿಧ ರಾಜ್ಯಗಳ ಸ್ತಬ್ಧ ಚಿತ್ರ ಪ್ರದರ್ಶನವಾಗಲಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಪ್ರಧಾನಿ ಮೋದಿ ನಾಳೆ ಸೈನಿಕರ ಜೊತೆಗೆ ದೀಪಾವಳಿ ಆಚರಿಸಲಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *