ಸೇತುವೆಗೆ ಕಾರು ಡಿಕ್ಕಿ – ವ್ಯಕ್ತಿ ಸಾವು, ಪುತ್ರಿಗೆ ಗಂಭೀರ ಗಾಯ

Public TV
1 Min Read

ಕಾರವಾರ: ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಅವರ ಪುತ್ರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಗುತ್ತಿಗೆದಾರ ಜೋಸೆಫ್ ಕುಟ್ಟಿ (46) ಎಂದು ಗುರುತಿಸಲಾಗಿದ್ದು, ಅವರ 16 ವರ್ಷದ ಪುತ್ರಿ ಅನು ಮರಿಯಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೀಗ ಅನು ಮರಿಯಾ ಅವರಿಗೆ ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: 15ರ ಹುಡುಗಿ ಮದುವೆ ಆಗಲು ನಿರಾಕರಿಸಿದ್ದಕ್ಕೆ 19ರ ಹುಡುಗ ವಿದ್ಯುತ್ ಟವರ್ ಏರಿ ಕುಳಿತ

ಮೃತ ಜೋಸೆಫ್‍ರ ಮಗಳು ನೀಟ್ ಪರೀಕ್ಷೆಗೋಸ್ಕರ ಮಂಗಳೂರಿಗೆ ಹೋಗಿ ವಾಪಾಸಾಗುತ್ತಿದ್ದರು. ಈ ವೇಳೆ ಭಾರೀ ಮಳೆಯ ನಡುವೆ ಬೆಳಕೆ ಸೇತುವೆಯ ಹತ್ತಿರ ದನವೊಂದು ಕಾರಿಗೆ ಅಡ್ಡಬಂದಿದ್ದು, ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ:  ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಿರುದ್ಧ ದೂರು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *