ಏಕಕಾಲದಲ್ಲಿ ಚುನಾವಣೆ ನಡೆಸುವುದು ಸಂವಿಧಾನದ ಮೂಲ ರಚನೆಯನ್ನ ಉಲ್ಲಂಘಿಸುವುದಿಲ್ಲ: ಡಿ.ವೈ ಚಂದ್ರಚೂಡ್

Public TV
2 Min Read

– ಒಂದು ದೇಶ ಒಂದು ಚುನಾವಣೆ ಬೆಂಬಲಿಸಿದ ನಿವೃತ್ತ ಸಿಜೆಐ

ನವದೆಹಲಿ: ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ. ಅಲ್ಲದೇ ಹೆಚ್ಚಿನ ಸ್ಪಷ್ಟತೆಗಾಗಿ ಮಸೂದೆಯ ಕೆಲವು ನಿಬಂಧನೆಗಳನ್ನು, ವಿಶೇಷವಾಗಿ ಚುನಾವಣಾ ಆಯೋಗದ ಅಧಿಕಾರಗಳು ಮತ್ತು ತುರ್ತು ಪರಿಸ್ಥಿತಿಗಳ ಬಗ್ಗೆ ಪರಿಶೀಲನೆಯಾಗಬೇಕು ಎಂದು ನಿವೃತ್ತ ಸಿಜೆಐ ಡಿ.ವೈ ಚಂದ್ರಚೂಡ್ (DY Chandrachud) ಹೇಳಿದ್ದಾರೆ.

ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ ಏರ್ಪಡಿಸಿದ್ದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಅಸಮಕಾಲಿಕ ಅಥವಾ ಏಕಕಾಲಿಕವಲ್ಲದ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗೆ ಅತ್ಯಗತ್ಯ ಸ್ಥಿತಿಯಲ್ಲ. ಆದ್ದರಿಂದ ಇದನ್ನು ಸಂವಿಧಾನದ ಮೂಲ ಚೌಕಟ್ಟಿನ ಭಾಗವಾಗಿ ನೋಡಲಾಗುವುದಿಲ್ಲ. ವಾಸ್ತವವಾಗಿ, ಗಣರಾಜ್ಯದ ಆರಂಭಿಕ ವರ್ಷಗಳಲ್ಲಿ ಸಂವಿಧಾನದ ಮೂಲ ವಿನ್ಯಾಸವು ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದಾಗಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ಗುನ್ನಾ – ವಾರ್ಷಿಕ 40 ಲಕ್ಷ ವಹಿವಾಟು ಮೀರಿದ್ರೆ GST ಫಿಕ್ಸ್

ವಿಧಾನಿಕ ಮಿತಿಯೊಳಗೆ ಚುನಾವಣೆಗಳನ್ನು ನಡೆಸಿದರೆ, ವಿಧಾನಸಭೆಯ ಅಧಿಕಾರಾವಧಿಯನ್ನು ಮೊಟಕುಗೊಳಿಸಿದರೂ ಮತದಾರರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಹಕ್ಕನ್ನು ಉಲ್ಲಂಘಿಸುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: Air India Crash | ವಿಮಾನ ದುರಂತಕ್ಕೂ ಮುನ್ನವೇ ಏರ್‌ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು ಅಮೆರಿಕ

ಏಕಕಾಲದಲ್ಲಿ ಚುನಾವಣೆಗಳು ಸ್ಥಳೀಯ ಸಮಸ್ಯೆಗಳನ್ನು ಮರೆಮಾಡಬಹುದು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಭಾಷಾ ಸಂಬAಧಿತ ಉದಾಹರಣೆಯನ್ನು ಉಲ್ಲೇಖಿಸಿದರು. ಅವು ಸಾಮಾನ್ಯವಾಗಿ ಸ್ಥಳೀಯವಾಗಿರುತ್ತವೆ. ಆದರೆ ರಾಷ್ಟ್ರೀಯ ಚುನಾವಣಾ ಚರ್ಚೆಯ ಭಾಗವಾಗಿ ಹೊರ ಹೊಮ್ಮಬಹುದು ಎಂದು ಆರೋಪವನ್ನು ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ದುಪ್ಪಟ್ಟು ಹಣ ವಸೂಲಿ – ಒಂದೇ ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋ ಸೀಜ್

ರಾಜಕೀಯ ಸ್ಥಿರತೆಯ ಕುರಿತು ಮಾತನಾಡಿದ ಅವರು, ಸುಗಮ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಅವಿಶ್ವಾಸ ನಿರ್ಣಯಗಳ ಮೇಲೆ ಮಿತಿಗಳನ್ನು ಹಾಕಬಹುದು. ಇದಕ್ಕೆ ಸಾಂವಿಧಾನಿಕ ತಿದ್ದುಪಡಿ ಅಗತ್ಯವಿಲ್ಲ. ಸದನದ ನಿಯಮಗಳಲ್ಲಿ ಬದಲಾವಣೆಗಳ ಮೂಲಕ ಇದನ್ನು ಕಾರ್ಯಗತಗೊಳಿಸಬಹುದು ಎಂದು ಹೇಳಿದ್ದಾರೆ.

ಈ ವೇಳೆ ಉಪಸ್ಥಿತರಿದ್ದ ಮಾಜಿ ಸಿಜೆಐ ಜೆ.ಎಸ್.ಖೇಹರ್ (JS Khehar) ಅವರು ಮಾತನಾಡಿ, ಮಸೂದೆಯು ಸಂವಿಧಾನದ ಮೂಲ ತತ್ವಗಳನ್ನು ಉಲ್ಲಂಘಿಸುವುದಿಲ್ಲ ಎಂದು ವಿಧಾನಸಭೆಗೆ ಚುನಾವಣೆಗಳನ್ನು ಯಾವಾಗ ನಡೆಸಬೇಕೆಂದು ನಿರ್ಧರಿಸುವಲ್ಲಿ ಚುನಾವಣಾ ಆಯೋಗಕ್ಕೆ ವ್ಯಾಪಕ ವಿವೇಚನೆಯನ್ನು ನೀಡುವ ಮಸೂದೆಯ ಸೆಕ್ಷನ್ 82ಂ(5)ರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

Share This Article