ಖಳನಟರಾದ ಅನಿಲ್, ಉದಯ್ ದುರಂತ ಸಾವಿಗೆ ಒಂದು ವರ್ಷ

Public TV
1 Min Read

ಬೆಂಗಳೂರು: `ಮಾಸ್ತಿಗುಡಿ’ ಚಿತ್ರೀಕರಣದ ವೇಳೆ ಖಳನಟರಾದ ಅನಿಲ್ ಹಾಗೂ ಉದಯ್ ಅವರ ದುರಂತ ಸಾವಿಗೆ ಇಂದು ಒಂದು ವರ್ಷ.

ಹೌದು. ಕಳೆದ ವರ್ಷ ಇದೇ ದಿನ ಮಧ್ಯಾಹ್ನ ನಟ ದುನಿಯಾ ವಿಜಯ್ ಅಭಿನಯದ `ಮಾಸ್ತಿಗುಡಿ’ ಸಿನಿಮಾದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ಸ್ಟಂಟ್ ಮಾಡಲು ಹೋಗಿ ಉದಯ್ ಮತ್ತು ಅನಿಲ್ ಮೇಲಿನಿಂದ ತಿಪ್ಪಗೊಂಡನಹಳ್ಳಿ ಕೆರೆಯ ನೀರಿನ ಆಳಕ್ಕೆ ಬಿದ್ದು ಸಾವಿಗೀಡಾಗಿದ್ದರು. ಹೀಗಾಗಿ ಅನಿಲ್ ಮತ್ತು ಉದಯ್ ಅವರ ದುರಂತ ಸಾವಿಗೆ ಇಂದು ವರ್ಷವಾದ ಹಿನ್ನೆಲೆಯಲ್ಲಿ ಸ್ನೇಹಿತರು ಕುಟುಂಬಸ್ಥರ ಉಪಸ್ಥಿತಿಯಲ್ಲಿ ಅವರ ಮೊದಲನೇ ಪುಣ್ಯ ತಿಥಿ ಕಾರ್ಯಕ್ರಮ ಮಾಡಲಾಗುತ್ತಿದೆ.

ಬೆಳಗ್ಗೆ ಈ ಇಬ್ಬರು ನಟರ ಕುಟುಂಬಸ್ಥರು ಬನಶಂಕರಿ ರುದ್ರಭೂಮಿಯಲ್ಲಿ ಅನಿಲ್, ಉದಯ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅನಿಲ್, ಉದಯ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿವಿಧ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ. ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ, ಅನ್ನಸಂತರ್ಪಣೆ, ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಮೇ.12ರಂದು ಮಾಸ್ತಿಗುಡಿ ಬಿಡುಗಡೆ

ಇಷ್ಟು ಮಾತ್ರವಲ್ಲದೇ ಕದಿರೇನಹಳ್ಳಿ ಬ್ರಿಜ್ಡ್ ಸರ್ಕಲ್‍ನಲ್ಲಿ ಅನಿಲ್ ಉದಯ್ ಸ್ಮಾರಕ ನಿರ್ಮಾಣಕ್ಕೆ ತಯಾರಿ ನಡೆಯುತ್ತಿದ್ದು ಮುಂದಿನ ವರ್ಷದಲ್ಲಿ ಉದ್ಘಾಟನೆಯಾಗಲಿದೆ. ಕದಿರೇನಹಳ್ಳಿ ಬ್ರಿಡ್ಜ್ ಮೇಲೆ ನಡೆಯುತ್ತಿರುವ ಪುಣ್ಯತಿಥಿ ಆಚರಣೆಯಲ್ಲಿ ಅನಿಲ್ ಪತ್ನಿ ರಮ್ಯಾ, ಅನಿಲ್ ತಾಯಿ ವಿಜಯಲಕ್ಷ್ಮಿ ಉದಯ್ ತಾಯಿ ಕೌಶಲ್ಯ ಭಾಗಿಯಾಗಿದ್ದಾರೆ.

ಮಾಸ್ತಿಗುಡಿ ನಿರ್ಮಾಪಕ ಸುಂದರ್ ಪಿ ಗೌಡ ಚಾರಿಟೇಬಲ್ ಟ್ರಸ್ಟ್‍ನ ಮುಖಂಡತ್ವ ವಹಿಸಿಕೊಂಡು ಪ್ರತಿ ವರ್ಷ ದೀನ ದಲಿತರಿಗೆ ಸಹಾಯ ಮಾಡೋಕೆ ನಿರ್ಧರಿಸಿದ್ದಾರೆ. ಪುಣ್ಯತಿಥಿ ಆಣರಣೆಯ ವೇಳೆ ನಿರ್ಮಾಪಕ ಸುಂದರ್ ಪಿ ಗೌಡ, ಹಾಗೂ ನಟ ದುನಿಯಾ ವಿಜಯ್ ತಂದೆ ಉಪಸ್ಥಿತಿಯಿದ್ದು, ಶೂಟಿಂಗ್ ನಿಮಿತ್ತ ದುನಿಯಾ ವಿಜಿ ಪುಣ್ಯತಿಥಿ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

ಮಾಸ್ತಿಗುಡಿ ಚಿತ್ರವನ್ನು ನಾಗಶೇಖರ್ ನಿರ್ದೇಶನ ಮಾಡಿದ್ದರು. ಚಿತ್ರದಲ್ಲಿ ಕೃತಿ ಕರಬಂಧ ಹಾಗೂ ಅಮೂಲ್ಯ ನಟಿಸಿದ್ದರು. ಈ ಚಿತ್ರ ಮೇ 12ರಂದು ಬಿಡುಗಡೆಗೊಂಡಿತ್ತು.

https://www.youtube.com/watch?v=7sSL-_09xO0

https://www.youtube.com/watch?v=33UF4AToAd0

https://www.youtube.com/watch?v=8h6lS3M-Dzs

https://www.youtube.com/watch?v=_y9vGs0nEHM

Share This Article
Leave a Comment

Leave a Reply

Your email address will not be published. Required fields are marked *