ಬೆಲೆ ದುಬಾರಿಯಾದ್ರೂ ರೈತರ ಕೈಗೆ ಸಿಗುತ್ತಿಲ್ಲ ಈರುಳ್ಳಿ ಕಾಸು!

Public TV
1 Min Read

ಚಿಕ್ಕೋಡಿ (ಬೆಳಗಾವಿ): ರಾಜ್ಯದಲ್ಲಿ ಟೊಮೆಟೋ (Tomato) ಬಳಿಕ ಈರುಳ್ಳಿ ಬೆಲೆ ಗಗನಕ್ಕೇರುತ್ತಿದ್ದು, ಗ್ರಾಹಕರ ಕೈ ಸುಡುತ್ತಿದೆ. ಕಳೆದ ವಾರ 30 ರಿಂದ 40 ರೂಪಾಯಿ ಇದ್ದ ಈರುಳ್ಳಿ (Onion) ಬೆಲೆ, ಈಗ 60 ರಿಂದ 80 ರೂ.ಗೆ ತಲುಪಿದೆ. ಹೀಗಾಗಿ ಈರುಳ್ಳಿ ಕೊಂಡುಕೊಳ್ಳುವವರ ಸಂಖ್ಯೆಯೂ ಇಳಿಕೆಯಾಗಿದೆ ಅಂತ ಈರುಳ್ಳಿ ವ್ಯಾಪಾರಸ್ಥರು ಅಳಲು ತೋಡಿಕೊಂಡಿದ್ದಾರೆ.

ಚಿಕ್ಕೋಡಿಯಲ್ಲಿ ಮಧ್ಯವರ್ತಿಗಳು ಈರುಳ್ಳಿಯನ್ನ ಸ್ಟಾಕ್ ಮಾಡಿಟ್ಟುಕೊಂಡು ಹೆಚ್ಚಿನ ಲಾಭ ಪಡೆಯುವ ಹುನ್ನಾರದಲ್ಲಿ ಇದ್ದಾರೆ. ಮಾರುಕಟ್ಟೆಯಲ್ಲಿ ಅಭಾವ ಸೃಷ್ಟಿಸಿ ಇನ್ನಷ್ಟು ಬೆಲೆ ಏರುವ ನಿರೀಕ್ಷೆಯಲ್ಲಿದ್ದಾರೆ. ಬಡವರ ಪಾಡಂತೂ ಯಾರಿಗೂ ಹೇಳದ ಹಾಗೆ ಆಗಿದೆ. 100 ರೂ.ಗಳಲ್ಲಿ ವಾರದ ಸಂತೆ ಮಾಡುತ್ತಿದ್ದ ಬಡವರು ಒಂದು ಕೆಜಿ ಈರುಳ್ಳಿಗೆ 80 ರೂ. ಕೊಟ್ಟು ಖರೀದಿಸಲು ಕಷ್ಟಪಡುತ್ತಿದ್ದಾರೆ.

ಬಾಗಲಕೋಟೆಯಲ್ಲೂ (Bagalkote) ಇದೇ ಪರಿಸ್ಥಿತಿ ಕಂಡು ಬಂದಿದೆ. ಗ್ರಾಹಕರಿಗೂ ಖುಷಿಯಿಲ್ಲ, ರೈತರಿಗೂ ಖುಷಿಯಿಲ್ಲ. ಆದ್ರೆ ಮಧ್ಯವರ್ತಿಗಳಿಗೆ ಮಾತ್ರ ಬೆಲೆ ಏರಿಕೆಯಿಂದ ಸಂತಸ ತಂದಿದೆ. ರೈತರು ಬೆಲೆ ಏರಿಕೆಯಾದರೂ ಖುಷಿಪಡುತ್ತಿಲ್ಲ. ಮುಂಗಾರು ಮಳೆ ಕೈ ಕೊಟ್ಟ ಕಾರಣ ಈರುಳ್ಳಿ ಬಿತ್ತನೆಯಲ್ಲೂ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ. ಒಣಬೇಸಾಯದ ಈರುಳ್ಳಿ ಒಣಗಿ ಹಾಳಾಗಿದೆ. ಬೋರ್ ವೆಲ್ ಅಂತರ್ಜಲ ಕಡಿಮೆಯಾಗಿ ನೀರಾವರಿ ಕೃಷಿಕರ ಈರುಳ್ಳಿ ಕೂಡ ಸರಿಯಾಗಿ ಬೆಳೆದಿಲ್ಲ. ಇದೆಲ್ಲ ಕಾರಣದಿಂದ ಈರುಳ್ಳಿ ಬೆಲೆ ಇಂದು ಗಗನಕ್ಕೆ ಏರಿದೆ. ಆದರೆ ಬೆಲೆ ಏರಿಕೆಯಾದರೂ ರೈತರಿಗೆ ಒಂದು ರೂಪಾಯಿ ಆದಾಯವೂ ಸಿಗ್ತಿಲ್ಲ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‍ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಒಟ್ಟಾರೆ ಒಂದು ಕಡೆ ಈರುಳ್ಳಿ ಬೆಲೆ ಏರಿಕೆಯಿಂದ ಗ್ರಾಹಕರು ಪರದಾಡುತ್ತಿದ್ದಾರೆ. ಆದರೆ ಬೆಲೆ ಏರಿದರೂ ಇಳುವರಿ ಹೊಡೆತದಿಂದ ಲಾಭವಿಲ್ಲದೆ ರೈತರು ಪರಿತಪಿಸುತ್ತಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್