ನಿಮ್ಮೂರಲ್ಲಿ ವೋಟು ಬಂದಿಲ್ಲ, ಅಭಿವೃದ್ಧಿಗೆ ಅನುದಾನ ನೀಡಲ್ಲ: ಅನ್ಸಾರಿ

Public TV
1 Min Read

ಕೊಪ್ಪಳ: ನಿಮ್ಮೂರಿನಲ್ಲಿ ನನಗೆ ವೋಟ್ ಬಂದಿಲ್ಲ. ಹದಿನೈದಿಪ್ಪತ್ತು ವೋಟ್ ಬಂದ್ರೆ ಕೆಲಸ ಮಾಡಲು ಆಗುತ್ತಾ ಎಂದು ಪ್ರಶ್ನಿಸುವ ಮೂಲಕ ಕೈ ನಾಯಕ ಇಕ್ಬಾಲ್ ಅನ್ಸಾರಿ ಸಂವಿಧಾನ ವಿರೋಧಿ ನಡೆ ಅನುಸರಿಸಿದ್ದಾರೆ.

ಗಂಗಾವತಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಬಾಯಿಂದಲೇ ಇಂಥ ಸಂವಿಧಾನ ವಿರೋಧಿ ಹೇಳಿಕೆ ಹೊರ ಬಿದ್ದಿದೆ. ನನಗೆ ವೋಟ್ ಹಾಕದ ಗ್ರಾಮಕ್ಕೆ ಅಭಿವೃದ್ಧಿಗಾಗಿ ಅನುದಾನ ನೀಡಲ್ಲ ಎಂದು ಅವರು ಬಹಿರಂಗವಾಗಿಯೇ ಹೇಳಿದ್ದಾರೆ.

ಗಂಗಾವತಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಇಂದಿರಾನಗರ ಗ್ರಾಮದಲ್ಲಿ ಶನಿವಾರ ಅನ್ಸಾರಿ ಪ್ರಚಾರಕ್ಕೆ ತೆರಳಿದ್ದಾರೆ. ಈ ವೇಳೆ ಜನ, ಕಳೆದ ಬಾರಿ ಬಂದಾಗ ಮಸೀದಿ ಅಭಿವೃದ್ಧಿಗೆ ಹಣ ನೀಡುತ್ತೇನೆ ಎಂದು ಭರವಸೆ ನೀಡಿದ್ದೀರಿ. ಆದರೆ ಇದೂವರೆಗೆ ಹಣ ಬಿಡುಗಡೆ ಮಾಡಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಪ್ರಶ್ನೆಗೆ ಅನ್ಸಾರಿ,  2013ರಲ್ಲಿ ನನಗೆ ನಿಮ್ಮ ಗ್ರಾಮದವರು ಎಷ್ಟು ಮತ ನೀಡಿದ್ದೀರಿ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೇ ನಿಮ್ಮೂರಲ್ಲಿ ಕೇವಲ 15 ರಿಂದ 20 ವೋಟ್ ಮಾತ್ರ ಬಂದಿವೆ. ಇಷ್ಟು ವೋಟ್ ಹಾಕಿದ್ರೆ ಕೆಲಸ ಮಾಡಲು ಆಗುತ್ತಾ ಎಂದು ಉತ್ತರಿಸಿದ್ದಾರೆ. ಕೊನೆಗೆ ಈ ಸಲ ನನ್ನ ಜೊತೆ ಇರಿ ಎಲ್ಲ ಮಾಡೋಣ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

https://www.youtube.com/watch?v=CGrl__faRx0

Share This Article
Leave a Comment

Leave a Reply

Your email address will not be published. Required fields are marked *