ವರ್ಗಾವಣೆ ಮಾಡಿದರೂ ಜಾಗ ಖಾಲಿ ಮಾಡದ ಮುಕ್ತ ವಿವಿ ಹಣಕಾಸು ಅಧಿಕಾರಿ!

By
1 Min Read

ಮೈಸೂರು: ರಾಜ್ಯ ಮುಕ್ತ ವಿವಿಯ (Open University) ಹಣಕಾಸು ಅಧಿಕಾರಿ (Finance Officer) ಮೂರು ಬಾರಿ ವರ್ಗಾವಣೆಯಾದರೂ (Transfer) ಸರ್ಕಾರದ ಆದೇಶಕ್ಕೆ ಡೋಂಟ್ ಕೇರ್ ಎನ್ನುತ್ತಾ ಇದ್ದ ಜಾಗದಲ್ಲೇ ಕುಳಿತಿದ್ದಾರೆ.

ರಾಜ್ಯ ಮುಕ್ತ ವಿವಿಯಲ್ಲಿ ಹಣಕಾಸು ಅಧಿಕಾರಿ ಖಾದರ್ ಪಾಷಾರನ್ನು ಆ ಸ್ಥಾನದಿಂದ ವರ್ಗಾವಣೆ ಮಾಡಿ ತಿಂಗಳು ಕಳೆದರೂ ಪಾಷಾ ಮುಕ್ತ ವಿವಿ ಬಿಟ್ಟು ಹೋಗುತ್ತಿಲ್ಲ. ಮುಕ್ತ ವಿವಿಯಿಂದ ಮಂಡ್ಯದ ಮೈ ಶುಗರ್ ಕಂಪನಿ ಲಿಮಿಟೆಡ್ ಹಣಕಾಸು ಅಧಿಕಾರಿಯಾಗಿ ಜುಲೈ 26ರಂದು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ಚೈತ್ರಾ ಗ್ಯಾಂಗ್ ಮಾದರಿಯಲ್ಲೇ ಮತ್ತೊಂದು ಪ್ರಕರಣ – ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಲಕ್ಷ ಲಕ್ಷ ವಂಚನೆ

ಆದರೂ ಸರ್ಕಾರದ ಆದೇಶಕ್ಕೆ ಖಾದರ್ ಪಾಷಾ ಡೋಂಟ್ ಕೇರ್ ಅಂದಿದ್ದಾರೆ. ಹೀಗಾಗಿ ಸರ್ಕಾರ ಸೆ.7ರಂದು ಖಾದರ್ ಪಾಷಾಗೆ ತಿಳುವಳಿಕೆ ಪತ್ರ ಕಳುಹಿಸಿದೆ. ವರ್ಗಾವಣೆ ಮಾಡಿರುವ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗಿಲ್ಲ. ಈ ಕೂಡಲೇ ಸೂಚಿಸಿರುವ ಸ್ಥಳಕ್ಕೆ ಹಣಕಾಸು ಅಧಿಕಾರಿಯಾಗಿ ಹಾಜರಾಗಿ ಸಿಟಿಸಿ ಪತ್ರವನ್ನು ಕಚೇರಿಗೆ ಸಲ್ಲಿಸಿ ಎಂದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕ ಪ್ರಧಾನ ನಿರ್ದೇಶಕರು ಪತ್ರದಲ್ಲಿ ಸೂಚಿಸಿದ್ದಾರೆ. ಇದನ್ನೂ ಓದಿ: ಚೈತ್ರಾ ಗೆಳೆಯ ಶ್ರೀಕಾಂತ್‌ ವಿರುದ್ಧದ ಕೇಸ್‌ಗೆ ಮತ್ತೊಂದು ಸೆಕ್ಷನ್‌ ದಾಖಲು

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್