ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಗೇಮ್ ಪ್ಲಾನ್-`ಕೈ’ಗೆ ಆಪರೇಷನ್!

Public TV
1 Min Read

ಮೈಸೂರು: ಈ ಬಾರಿ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಸಖತ್ ಗೇಮ್ ಪ್ಲಾನ್ ಮಾಡಿದೆ. ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕ ಜಿ.ಟಿ.ದೇವೇಗೌಡ ಆಪರೇಷನ್ ಕಾಂಗ್ರೆಸ್ ಗೆ ಮುಂದಾಗಿದ್ದಾರೆ.

ಈಗಾಗಲೇ ಸಿಎಂ ಸಿದ್ದರಾಮಯ್ಯರ ಆಪ್ತರಾಗಿದ್ದ ದಿ.ಕಂಪಿರಂಗೇಗೌಡ ಪುತ್ರ ಉಮಾಶಂಕರ್ ಸೇರಿದಂತೆ 25ಕ್ಕೂ ಹೆಚ್ಚು ಸ್ಥಳೀಯ ಪ್ರಬಲ ಕಾಂಗ್ರೆಸ್ ಮುಖಂಡರನ್ನು ಜೆಡಿಎಸ್ ನತ್ತ ಸೆಳೆಯುವಲ್ಲಿ ಜಿ.ಟಿ.ದೇವೇಗೌಡರು ಯಶ್ವಸಿಯಾಗಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಹಾಲಿ ಶಾಸಕರಾಗಿರುವ ಜಿ.ಟಿ.ದೇವೇಗೌಡರು ಸಿಎಂರನ್ನು ಸೋಲಿಸಲು ಎಲ್ಲ ರೀತಿಯಲ್ಲಿ ಸನ್ನದ್ಧರಾಗುತ್ತಿದ್ದಾರೆ.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದ 35ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ಜೆಡಿಎಸ್ ಸೇರಲಿದ್ದಾರೆ ಎಂಬುದನ್ನು ಖಚಿತ ಪಡಿಸಿದ್ದಾರೆ. ಸಿದ್ದರಾಮಯ್ಯರ ಆಪ್ತರಲ್ಲಿ ಒಬ್ಬರಾಗಿದ್ದ ಕಂಪಿರಂಗೇಗೌಡರ ಪುತ್ರ ಉಮಾಶಂಕರ್ ಜೆಡಿಎಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್‍ಗೆ ಪರೋಕ್ಷವಾಗಿ ಭಾರೀ ಹೊಡೆತ ಬೀಳುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *