`ಆಪರೇಷನ್ ಸಿಂಧೂರ’ ಭಾರತದ ರಾಜಕೀಯ, ಸಾಮಾಜಿಕ, ಮಿಲಿಟರಿ ಶಕ್ತಿಯ ಬಲ – ರಾಜನಾಥ್ ಸಿಂಗ್

Public TV
2 Min Read

ನವದೆಹಲಿ: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆ ಭಾರತದ ರಾಜಕೀಯ, ಸಾಮಾಜಿಕ ಹಾಗೂ ಮಿಲಿಟರಿ ಶಕ್ತಿಯ ಬಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದರು.

ಲಕ್ನೋದಲ್ಲಿ (Lucknow) ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯವನ್ನು ವರ್ಚುವಲ್ ಆಗಿ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಭಾರತದ ರಾಜಕೀಯ, ಸಾಮಾಜಿಕ ಮತ್ತು ಮಿಲಿಟರಿ ಶಕ್ತಿಯ ಬಲವೇ ಆಪರೇಷನ್ ಸಿಂಧೂರ. ಇಂದು ಭಾರತ ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾಗಿದೆ. ನಾವು ನಿರಂತರವಾಗಿ ನಮ್ಮ ಶಕ್ತಿಯನ್ನ ಹೆಚ್ಚಿಸಿಕೊಳ್ಳುತ್ತಿದ್ದೇವೆ. ಇಂದು ನಮ್ಮ ಸಶಸ್ತ್ರ ಪಡೆಗಳು ಭಾರತದ ಮೇಲೆ ದಾಳಿ ನಡೆಸಿ ಅನೇಕ ಕುಟುಂಬಗಳನ್ನು ಬಲಿಪಡೆದ ಭಯೋತ್ಪಾದಕ ಸಂಘಟನೆಗಳನ್ನು ಹೊಡೆದುರುಳಿಸಿವೆ. ಈ ಮೂಲಕ `ಆಪರೇಷನ್ ಸಿಂಧೂರ’ಕ್ಕೆ ನ್ಯಾಯ ಒದಗಿಸಿಕೊಟ್ಟಿದೆ ಎಂದರು.ಇದನ್ನೂ ಓದಿ: ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್

ಭಾರತದ ಮೂರು ಪಡೆಗಳ ಶೌರ್ಯವನ್ನು ಇಂದು ಇಡೀ ದೇಶವೇ ಕೊಂಡಾಡುತ್ತಿದೆ. ಈ ಕಾರ್ಯಾಚರಣೆ ಭಯೋತ್ಪಾದನೆಯ ವಿರುದ್ಧ ಭಾರತದ ದೃಢ ಸಂಕಲ್ಪ ಮತ್ತು ಮಿಲಿಟರಿ ಶಕ್ತಿಯ ಪ್ರದರ್ಶನವಾಗಿದೆ. ಈ ಕಾರ್ಯಾಚರಣೆಯಲ್ಲಿ ನಾವು ನಾಗರಿಕರನ್ನು ಗುರಿಯಾಗಿಸಿಕೊಂಡಿಲ್ಲ. ಆದರೆ ಪಾಕಿಸ್ತಾನ ಭಾರತದ ಕೆಲವು ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದೇವಾಲಯ, ಗುರುದ್ವಾರಗಳ ಮೇಲೆ ದಾಳಿ ನಡೆಸಲು ಪ್ರಯತ್ನಿಸಿದೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಪಡೆಗಳು ಪಾಕ್‌ನ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದೆ ಎಂದು ತಿಳಿಸಿದರು.

ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆದರೆ ಏನಾಗುತ್ತದೆ ಎಂದು ಇಂದು ಇಡೀ ಜಗತ್ತು ನೋಡುತ್ತಿದೆ. ಉರಿಯಲ್ಲಿ ಪಾಕ್ ನಡೆಸಿದ ಶೆಲ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದೊಳಗೆ ಸರ್ಜಿಕಲ್ ಸ್ಟ್ರೈಕ್ ನಡೆಸಿತು ಎಂದರು.ಇದನ್ನೂ ಓದಿ: ಆಪರೇಷನ್‌ ಸಿಂಧೂರ- ಹುತಾತ್ಮ ವೀರ ಯೋಧನಿಗೆ ಭಾವುಕ ವಿದಾಯ; ಕಣ್ಣೀರಿಟ್ಟ ಕುಟುಂಬಸ್ಥರು

Share This Article