ಬೆಂಗಳೂರು: ಬೆಳಗಾವಿ ಅಧಿವೇಶನಕ್ಕೆ (Belagavi Session) ಸಿದ್ಧತೆ ಆಗಿದ್ದು, ಉತ್ತರ ಕರ್ನಾಟಕ (North Karnataka) ಭಾಗದ ಸಮಸ್ಯೆಗಳ ಚರ್ಚೆಗೆ ಈ ಬಾರಿ ಹೆಚ್ಚು ಅವಕಾಶ ಕೊಡೋದಾಗಿ ಸ್ಪೀಕರ್ ಯು.ಟಿ.ಖಾದರ್ (UT Khader) ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನಕ್ಕೆ ಸಂಪೂರ್ಣ ತಯಾರಿ ನಡೆಸಿದ್ದೇವೆ. ಬೆಳಗಾವಿಯಲ್ಲಿ ಈಗಾಗಲೇ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇವೆ. ಅಧಿವೇಶನಕ್ಕೆ ಬರುವ ಯಾರಿಗೂ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಂಡಿದ್ದೇವೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಆದ್ಯತೆ ನೀಡುತ್ತಿದ್ದೇವೆ ಎಂದರು. ಇದನ್ನೂ ಓದಿ: Kolar | ಕೆರೆ ಮಧ್ಯೆ ತೆಪ್ಪದಲ್ಲಿ ಸಿಲುಕಿದ್ದ ಮಗುವಿನ ರಕ್ಷಣೆ
ಸರ್ಕಾರ 31 ಬಿಲ್ ತರ್ತಿದ್ದು, ಉತ್ತರ ಕರ್ನಾಟಕ ಚರ್ಚೆಗೆ ಅವಕಾಶ ತಡೆಯುತ್ತಿದೆ ಅಂತ ಬಿಜೆಪಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿಯಮದ ಪ್ರಕಾರ ಬಿಲ್ ಕೂಡ ಬರಲಿದೆ. ಬಿಲ್ ಬಗ್ಗೆಯೂ ಚರ್ಚೆ ನಡೆಸುತ್ತೇವೆ. ಅಧಿವೇಶನದಲ್ಲಿ ಚರ್ಚೆ ಆಗೋ ವಿಷಯಗಳಗಳ ಬಿಎಸಿ ಸಭೆ ನಡೆಯಲಿದೆ. ಸಭೆಯಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಇರುತ್ತಾರೆ. ಅಲ್ಲಿ ಏನೆಲ್ಲಾ ಚರ್ಚೆ ಆಗಬೇಕು ಅಂತ ಚರ್ಚೆ ಆಗಲಿದೆ. ಅದರಂತೆ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.
ರಾಜ್ಯ ಕಾಂಗ್ರೆಸ್ ಕುರ್ಚಿ ಕಿತ್ತಾಟದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,ನನಗೆ ಯಾವ ಕುರ್ಚಿ ಗಲಾಟೆ ಬಗ್ಗೆ ಗೊತ್ತಿಲ್ಲ.ನನಗೆ ನೀವು ಹೇಳಿದ ಮೇಲೆ ಹೀಗೆ ಅಂತ ಗೊತ್ತಾಗಿದ್ದು. ನನಗೆ ಈಗ ಅಧಿವೇಶನ ನಡೆಸಬೇಕು. ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅಧಿವೇಶನ ಉತ್ತಮವಾಗಿ ನಡೆಯಬೇಕು. ನನಗೆ ಬೆಳಗಾವಿ ಸೌಧ ಮತ್ತು ವಿಧಾನಸೌಧ ಬಿಟ್ಟು ಇನ್ನೇನು ಕಾಣ್ತಿಲ್ಲ. ಕುರ್ಚಿ ಗಲಾಟೆ ಬಗ್ಗೆ ಏನು ಗೊತ್ತಿಲ್ಲ ಎಂದರು. ಇದನ್ನೂ ಓದಿ: ಸಿಎಂ ಹೇಳಿದ್ದೇ ವೇದವಾಕ್ಯ – ಮತ್ತೆ ಗೂಗ್ಲಿ ಎಸೆದ ಡಿಕೆಶಿ

