ಕತ್ತಲಾಗಿದ್ದರಿಂದ ಪ್ರತಿ ದಾಳಿ ನಡೆಸಲಿಲ್ಲ: ಪಾಕಿಸ್ತಾನ ರಕ್ಷಣಾ ಸಚಿವ

Public TV
1 Min Read

ಇಸ್ಲಾಮಾಬಾದ್: ಭಾರತೀಯ ವಾಯು ಪಡೆ ಏರ್‌ ಸ್ಟ್ರೈಕ್ ದಾಳಿ ನಡೆಸಿದಾಗ ಕತ್ತಲಾಗಿತ್ತು. ಹೀಗಾಗಿ ಪ್ರತಿದಾಳಿ ಮಾಡಲು ಸಾಧ್ಯವಾಗಲಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಪರ್ವೇಜ್ ಖಟಕ್ ತಿಳಿಸಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ 2 ದಾಳಿಯಿಂದ ತತ್ತರಿಸಿದ್ದ ಪಾಕಿಸ್ತಾನ ಇಂದು ಸುದ್ದಿಗೋಷ್ಠಿ ಕರೆದು ಭಾರತದ ವಿರುದ್ಧ ಪ್ರತಿದಾಳಿ ನಡೆಸುತ್ತೇವೆ ಎಂದು ಹೇಳಿದೆ. ಈ ವೇಳೆ ಮಾಧ್ಯಮದವರು, ದಾಳಿಯ ವೇಳೆ ಪಾಕಿಸ್ತಾನ ವಾಯು ಪಡೆಯ ಏನು ಮಾಡುತ್ತಿತ್ತು? ಯಾಕೆ ಪ್ರತಿ ದಾಳಿ ನಡೆಸಲಿಲ್ಲ ಎಂದು ಪ್ರಶ್ನೆ ಕೇಳಿದ್ದಾರೆ.

ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ದಾಳಿಯು ಮುಂಜಾನೆ ಸುಮಾರು 3 ಗಂಟೆಯ ವೇಳೆ ನಡೆದಿದೆ. ಭಾರತೀಯ ವಾಯು ಪಡೆಯು ಗಡಿಯನ್ನು ದಾಟಿ 5 ರಿಂದ 6 ಕಿ.ಮೀ. ಒಳಗಡೆ ಪ್ರವೇಶಿಸಿ, ಬಾಂಬ್ ಹಾಕಿದ್ದಾರೆ. ರಾತ್ರಿ ದಾಳಿ ನಡೆದಿದ್ದರಿಂದ ಎಷ್ಟು ನಷ್ಟವಾಗಿದೆ ಎಂದು ತಿಳಿದಿಲ್ಲ. ಈ ವೇಳೆ ನಮ್ಮ ಏರ್‍ಫೋರ್ಸ್ ಸಿದ್ಧವಾಗಿತ್ತು. ಆದರೆ ಕತ್ತಲಾಗಿದ್ದರಿಂದ ಯುದ್ಧ ವಿಮಾನ ಹಾರಾಟ ಸಾಧ್ಯವಾಗಲಿಲ್ಲ ಎಂದು ಹೇಲಿದ್ದಾರೆ.

https://twitter.com/justgtin/status/1100385235928199170

ದಾಳಿಗೆ ಪ್ರತ್ಯುತ್ತರ ನೀಡಲು ನಮ್ಮ ವಾಯು ಪಡೆ ಸಿದ್ಧವಾಗಿದ್ದು, ನಮ್ಮ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಸದ್ಯದಲ್ಲಿಯೇ ಭಾರತೀಯ ವಾಯುಪಡೆಗೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.

ಇದೇ ವೇಳೆ ಪಕ್ಕದಲ್ಲೇ ಕುಳಿತಿದ್ದ ಪಾಕಿಸ್ತಾನ ವಿದೇಶಾಂಗ ಸಚಿವ ಷಾಹ್ ಮೊಹಮ್ಮದ್ ಖುರೇಷಿ ಮಾತನಾಡಿ, ದಾಳಿಯ ಕುರಿತು ರಕ್ಷಣಾ ಸಚಿವಾಲಯದ ಜೊತೆಗೆ ಚರ್ಚೆ ಮಾಡಿದ್ದೇನೆ. ಪಾಕಿಸ್ತಾನ ವಾಯು ಪಡೆ ಪ್ರತಿದಾಳಿಗೆ ಸಿದ್ಧವಾಗಿದ್ದು, ಇದು ಬಹುರೂಪದ ದಾಳಿಯಾಗಿರುತ್ತದೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *