ನನ್ನ ಹುಟ್ಟುಹಬ್ಬದ ಬಗ್ಗೆ ನಮ್ಮ ಅವ್ವ, ಅಪ್ಪನಿಗೆ ಗೊತ್ತು: ಸಿದ್ದರಾಮಯ್ಯ

Public TV
1 Min Read

ಚಿಕ್ಕಬಳ್ಳಾಪುರ: ಸಿದ್ದರಾಮೋತ್ಸವ ಸಕ್ಸಸ್ ಕಂಡು ಬಿಜೆಪಿಯವರಿಗೆ ಹೊಟ್ಟೆ ಉರಿ ಆಗಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಜಂಟಿ ರೋಡ್ ಶೋ ನಡೆಸಿದರು. ಈ ವೇಳೆ ಸಿದ್ದರಾಮಯ್ಯನವರಿಗೆ 75 ವರ್ಷ ವಯಸ್ಸೇ ಆಗಿಲ್ಲ ಎಂಬ ಬಿಜೆಪಿಯ ಕೆಲ ನಾಯಕರು ವ್ಯಂಗ್ಯವಾಡಿ ಸಿದ್ದರಾಮೋತ್ಸವದ ಬಗ್ಗೆ ಟೀಕಿಸಿದ್ದರ ಬಗ್ಗೆ ಕಿಡಿಕಾರಿದರು. ಇದನ್ನೂ ಓದಿ: ಚಂದ್ರಬಾಬು ನಾಯ್ಡು ಕ್ಷೇತ್ರದಿಂದ ಜಗನ್ ಸ್ಪರ್ಧೆ – 2 ವರ್ಷಕ್ಕೂ ಮುನ್ನ ರಂಗೇರಿದ ಚುನಾವಣಾ ರಾಜಕೀಯ

ನನ್ನ ಹುಟ್ಟುಹಬ್ಬದ ಬಗ್ಗೆ ಬಿಜೆಪಿಯವರಿಗೇನು ಗೊತ್ತು. ನಮ್ಮ ಅವ್ವ, ಅಪ್ಪನಿಗೆ ಗೊತ್ತು ಅಂತ ನಕ್ಕರು. ಬಿಜೆಪಿಯವರಿಗೆ ಸಿದ್ದರಾಮೋತ್ಸವದ ಸಕ್ಸಸ್ ಕಂಡು ಹೊಟ್ಟೆ ಉರಿ ಬಂದಿದೆ. ಅವರ ಮಾತಿಗೆ ಕಿಮ್ಮತ್ತು ಇಲ್ಲ ಅಂತ ತಿರುಗೇಟು ನೀಡಿದರು.  ಇದನ್ನೂ ಓದಿ: ಗಲ್ಲು ಶಿಕ್ಷೆ ಕಾನೂನಿನ ಬಳಿಕ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ: ಗೆಹ್ಲೋಟ್

ಚಿಂತಾಮಣಿ ವಿಧಾನ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರೋ ಪಾದಯಾತ್ರೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಆಗಮಿಸಿದ್ದರು. ಇಬ್ಬರು ನಾಯಕರಿಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದ್ದು, ಚಿಂತಾಮಣಿ ಬೆಂಗಳೂರು ರಸ್ತೆಯ ಟೋಲ್ ಗೇಟ್ ಬಳಿಯೇ ಜೆಸಿಬಿ ಮೂಲಕ ಹೂ ಸುರಿಮಳೆ ಹಾಗೂ ಬೃಹತ್ ಸೇಬಿನ ಹಾರ ಹಾಕಿ ಸ್ವಾಗತ ಕೋರಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *