ಶಿವರಾತ್ರಿ ಪ್ರಸಾದ ತಿಂದ ಬಳಿಕ 1500 ಮಂದಿ ಅಸ್ವಸ್ಥ

Public TV
1 Min Read

ಭೋಪಾಲ್: ಶಿವರಾತ್ರಿ ಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಿಚಡಿ ಪ್ರಸಾದವನ್ನ ತಿಂದು ಬರೋಬ್ಬರಿ 1500 ಜನ ಅಸ್ವಸ್ಥಗೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಇಲ್ಲಿನ ಬರ್ವಾನಿ ಜಿಲ್ಲೆಯ ಆಶ್ರಮವೊಂದರಲ್ಲಿ ಪ್ರಸಾದ ಹಂಚಲಾಗಿತ್ತು. ಪ್ರಸಾದ ಸೇವಿಸಿದ ಬಳಿಕ ಗ್ರಾಮಸ್ಥರಿಗೆ ವಾಂತಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ. ಸುಮಾರು 7 ಹಳ್ಳಿಗಳ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅವರಲ್ಲಿ 300 ಜನರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಸಾಕಷ್ಟು ಮಂದಿ ಅಸ್ವಸ್ಥಗೊಂಡಿದ್ದರಿಂದ ಟ್ರ್ಯಾಕ್ಟರ್ ಟ್ರಾಲಿ, ಪಿಕಪ್ ವಾಹನ ಹಾಗೂ ಖಾಸಗಿ ವಾಹನಗಳಲ್ಲಿ ಆಸ್ಪತ್ರೆಗೆ ರವಾನಿಸಬೇಕಾಯಿತು ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಅಸ್ವಸ್ಥಗೊಂಡವರನ್ನ ಗುರುತಿಸಿ ಜಿಲ್ಲಾಸ್ಪತ್ರೆಗೆ ಕರೆತರಲು ತಂಡವನ್ನ ನಿಯೋಜಿಸಲಾಗಿದೆ. ಮತ್ತೆರಡು ಖಾಸಗಿ ಆಸ್ಪತ್ರೆಗಳು ಕೂಡ ನೆರವು ನೀಡಿದ್ದು, ಹಲವರು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ತೇಜಸ್ವಿ ಎಸ್ ನಾಯ್ಕ್ ಹೇಳಿದ್ದಾರೆ.

ಘಟನೆಗೆ ಕಾರಣವೇನೆಂಬುದನ್ನ ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *