ಚಿಕ್ಕಬಳ್ಳಾಪುರದಲ್ಲಿ ನೀರಿನ ಗುಂಡಿಗೆ ಬಿದ್ದ ಕಾರು – ನಾಲ್ವರು ಯುವಕರು ಜಲ ಸಮಾಧಿ

Public TV
1 Min Read

ಚಿಕ್ಕಬಳ್ಳಾಪುರ: ರಸ್ತೆ ಬದಿಯಲ್ಲಿದ್ದ ನೀರಿನ ಗುಂಡಿಗೆ ಬಿದ್ದು ಬೆಂಗಳೂರು ನೋಂದಣಿ  ಕಾರಿನಲ್ಲಿದ್ದ (Car) ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದಿದೆ.

ಚಿಕ್ಕಬಳ್ಳಾಪುರದ ಬೈಪಾಸ್ ಕೆಳಗಿನ ತೋಟದ ಬಳಿಯ ಅಂಜನೇಯ ಸ್ವಾಮಿ ದೇವಾಲಯದ  ಮುಂದೆ ಈ ಘಟನೆ ನಡೆದಿದೆ. ಇದನ್ನೂ ಓದಿ: ನಾನು 40 ವರ್ಷಗಳ ಕಾಲ ವಾರಕ್ಕೆ 85-90 ಗಂಟೆ ಕೆಲಸ ಮಾಡಿದ್ದೆ, ನನ್ನ ಶ್ರಮ ವ್ಯರ್ಥವಾಗಲಿಲ್ಲ: ನಾರಾಯಣ ಮೂರ್ತಿ

ಶನಿವಾರ ರಾತ್ರಿ ಅತಿ ವೇಗದಿಂದ (Over Speed) ಬಂದ KA 03 MT 0761 ನಂಬರಿನ ಪೊಲೋ ವೋಕ್ಸ್‌ವಾಗನ್‌ ಕಾರು  ರಸ್ತೆ ಬದಿಯ ನೀರಿಗೆ ಬಿದ್ದು ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದವರು ಬೆಂಗಳೂರಿನಿಂದ ಬಾಗೇಪಲ್ಲಿಗೆ ತೆರಳುತ್ತಿದ್ದರು. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು ಹೈದರಾಬಾದ್ ಹೆದ್ದಾರಿಯ ಅಂಡರ್ ಪಾಸ್‌ನ ಗುಂಡಿಯೊಳಗೆ ಕಾರು ಬಿದ್ದಿದೆ. ಗುಂಡಿಯೊಳಗೆ ಸಂಪೂರ್ಣವಾಗಿ ಕಾರು ಮುಳುಗಿದ್ದರಿಂದ ನಾಲ್ವರು ಯುವಕರು ಜಲ ಸಮಾಧಿಯಾಗಿದ್ದಾರೆ. ಅಗ್ನಿ ಶಾಮಕ ದಳ, ಪೊಲೀಸರು  ನೀರಿನಿಂದ ಕಾರನ್ನು ಮೇಲಕ್ಕೆ ಎತ್ತಿದ್ದಾರೆ.

Share This Article