ವಿಶ್ವಸಂಸ್ಥೆ, ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ: ಪಾಕ್ ಉಪಪ್ರಧಾನಿ ಇಶಾಕ್ ದಾರ್

Public TV
1 Min Read

ಇಸ್ಲಾಮಾಬಾದ್: ನಮ್ಮ ಮೇಲಿನ ಭಾರತದ ದಾಳಿಯನ್ನು ಖಂಡಿಸುತ್ತೇವೆ ಎಂದು ಪಾಕ್ ಉಪಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಶಾಕ್ ದಾರ್(Ishaq Dar) ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತದ ಆಕ್ರಮಣವನ್ನು ಪಾಕಿಸ್ತಾನ(Pakistan) ಬಲವಾಗಿ ಖಂಡಿಸುತ್ತದೆ, ಇದು ಪಾಕಿಸ್ತಾನದ ಸಾರ್ವಭೌಮತ್ವ, ವಿಶ್ವಸಂಸ್ಥೆಯ, ಅಂತರರಾಷ್ಟ್ರೀಯ ಕಾನೂನು ಹಾಗೂ ಅಂತರ-ರಾಜ್ಯ ಸಂಬಂಧಗಳ ಸ್ಥಾಪಿತ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಪಹಲ್ಗಾಮ್ ದಾಳಿಯ(Pahalgam Attack) ನಂತರ, ಭಾರತೀಯ ನಾಯಕತ್ವವು ಮತ್ತೊಮ್ಮೆ ಭಯೋತ್ಪಾದನೆಯ ನೆಪವನ್ನು ಮುಂದಕ್ಕೆ ಕೊಂಡೊಯ್ಯಲು ಬಳಸಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ – ಆಕ್ರೋಶದ ಬೆನ್ನಲ್ಲೇ ಕಾಂಗ್ರೆಸ್‌ ಪೋಸ್ಟ್‌ ಡಿಲೀಟ್‌

ಭಾರತದ ಈ ದಾಳಿಯು ಪ್ರಾದೇಶಿಕ ಶಾಂತಿ ಮತ್ತು ಭದ್ರತೆಯನ್ನು ಅಪಾಯಕ್ಕೆ ಸಿಲುಕಿಸಿದೆ. ಭಾರತದ ಅಜಾಗರೂಕ ಕ್ರಮವು ಎರಡು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳನ್ನು ಪ್ರಮುಖ ಸಂಘರ್ಷಕ್ಕೆ ಹತ್ತಿರ ತಂದಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: Operation Sindoor | 23 ನಿಮಿಷದ ದಾಳಿಗೆ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್‌

ಇಂದು ತಡರಾತ್ರಿ ಭಾರತೀಯ ಸೇನೆ ಪಾಕಿಸ್ತಾನದ ೯ ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿದ್ದು, ೧೦೦ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತದ ಈ ದಾಳಿಗೆ ಇದೀಗ ಪಾಕಿಸ್ತಾನವು ಪತರುಗುಟ್ಟಿದ್ದು, ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.

Share This Article