ಉಗ್ರ ಸಂಘಟನೆಗೆ ಯುವಕರನ್ನ ಭರ್ತಿ ಮಾಡಿಕೊಳ್ತಿದೆ ಪಾಕ್

Public TV
2 Min Read

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಗೊಳಿಸಿದ ಬೆನ್ನಲ್ಲೆ ನೆರೆಯ ಪಾಕಿಸ್ತಾನಕ್ಕೆ ಆತಂಕ ಶುರುವಾಗಿದೆ. ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಬಳಿ ಒಳನುಸಳಿಸಲು ಸಂಚು ರೂಪಿಸುತ್ತಿದ್ದು, ಕಾಶ್ಮೀರದಲ್ಲಿ ಶಾಂತಿ ಕದಡುವ ಕಾರ್ಯಕ್ಕೆ ಮುಂದಾಗುವ ಪ್ರಯತ್ನಕ್ಕೆ ನೀಚ ಪಾಕಿಸ್ತಾನ ಮುಂದಾಗುತ್ತಿದೆ ಎನ್ನಲಾಗುತ್ತಿದೆ. ಇದೀಗ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್‍ಐ (ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್) ಉಗ್ರ ಸಂಘಟನೆಗಳಿಗೆ ಯುವಕರನ್ನು ಭರ್ತಿ ಮಾಡಿಕೊಳ್ಳಲು ಆರಂಭಿಸಿದೆ ಎಂದು ಭಾರತೀಯ ಗುಪ್ತಚರ ಇಲಾಖೆ ತಿಳಿಸಿದೆ.

ಪಾಕಿಸ್ತಾನದ ಮುಜಾಫರ್‍ಬಾದ್ ನಲ್ಲಿರುವ ಬಸನಾಡ್ ಶಿಬಿರದಲ್ಲಿ ಯುವಕರನ್ನು ಉಗ್ರ ಸಂಘಟನೆ ಸೇರ್ಪಡೆಯಾಗುವಂತೆ ಪ್ರಚೋದನೆ ನೀಡಲಾಗುತ್ತಿದೆ. ಉಗ್ರ ಸಂಘಟನೆಗಳಿಗೆ ನೇಮಕವಾದ ಯುವಕರಿಗೆ ಭಯೋತ್ಪಾದನೆ ಚಟುವಟಿಕೆ ಕುರಿತು ತರಬೇತಿಯನ್ನು ನೀಡಲಾಗುತ್ತಿದೆ. ತರಬೇತಿ ಬಳಿಕ ಉಗ್ರರನ್ನು ಐಎಸ್‍ಐ ತನ್ನ ನೇತೃತ್ವದಲ್ಲಿ ಲೀಪಾ ಮತ್ತು ಕೇರನ್ ಸೆಕ್ಟರ್ ನ ಲ್ಯಾಂಚ್ ಪ್ಯಾಡ್ ಮೂಲಕ ಜಮ್ಮು ಕಾಶ್ಮೀರ ಪ್ರವೇಶಿಸಲು ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆಯ ಮೂಲಗಳನ್ನು ಆಧಾರಿಸಿ ಮಾಧ್ಯಮ ವರದಿ ಮಾಡಿದೆ. ಇದನ್ನೂ ಓದಿ: ಪಾಕಿಗೆ ಹರಿಯತ್ತಿರುವ ನೀರನ್ನು ನಿಲ್ಲಿಸುವ ಕೆಲಸ ಆರಂಭಗೊಂಡಿದೆ – ಕೇಂದ್ರ ಸರ್ಕಾರ

ಗುಪ್ತಚರ ಇಲಾಖೆಯ ಮೂಲಗಳ ಪ್ರಕಾರ, ಪೇಶಾವರ ಮತ್ತು ಕ್ವೇಟ್ಟಾ ಪ್ರದೇಶಗಳ ಗುಡ್ಡುಗಾಡು ಇಲಾಖೆಯಲ್ಲಿ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳಿಗೆ ಯುವಕರನ್ನು ಭರ್ತಿ ಮಾಡಿಕೊಳ್ಳುವುದಕ್ಕೆ ಅಭಿಯಾನವನ್ನು ಆರಂಭಿಸಿದೆ. ಇತ್ತ ಪಾಕ್ ಆಕ್ರಮಿತ ಕಾಶ್ಮೀರದ ಪುಂಛ್, ಬಾಗ್ ಮತ್ತು ಕೊಟಲಿ ಭಾಗಗಳಲ್ಲಿ ಯುವಕರನ್ನು ಉಗ್ರ ಸಂಘಟನೆಗಳಿಗೆ ಭರ್ತಿ ಮಾಡಿಕೊಳ್ಳುವ ಅಭಿಯಾನವನ್ನು ಆರಂಭಿಸಿದೆ. ಆಗಸ್ಟ್ 9 ರಿಂದಲೇ ಮೀರ್‍ಪುರ ಮತ್ತು ಸಿಯಾಲ್‍ಕೋಟ್ ನಲ್ಲಿರು ಉಗ್ರ ಶಿಬಿರಗಳಲ್ಲಿ ಅಂಡರ್ ವಾಟರ್ ಟ್ರೈನಿಂಗ್ ಆರಂಭಗೊಂಡಿದೆ ಎಂಬ ಮಾಹಿತಿ ಲಭಿಸಿದೆ. ಇದನ್ನೂ ಓದಿ: 370 ಕಿತ್ತು ಹಾಕಿದ ಬಳಿಕ ಮೊದಲ ಗುಂಡಿನ ಚಕಮಕಿ – ಉಗ್ರ ಹತ್ಯೆ, ಪೊಲೀಸ್ ಅಧಿಕಾರಿ ಹುತಾತ್ಮ

ಬಾಲಕೋಟ್ ದಾಳಿ ಬಳಿಕ ತಮ್ಮ ಕ್ಯಾಂಪ್ ಬದಲಿಸಿಕೊಂಡಿರುವ ಉಗ್ರರಿಗೆ 10 ದಿನಗಳ ಬಳಿಕವೇ ರಿಫ್ರೆಶರ್ ಟ್ರೈನಿಂಗ್ ಸಹ ಆರಂಭಗೊಂಡಿದೆ. ಪಾಕ್ ಆಕ್ರಮಿತ ಕಾಶ್ಮೀರದ ಮನಶೆರಾ, ಗುಲಪುರ ಮತ್ತು ಕೊಟಲಿ ಭಾಗಗಳಲ್ಲಿ ತರಬೇತಿ ನಡೆಯುತ್ತಿದೆ. ಗುಪ್ತಚರ ಮಾಹಿತಿ ಅನ್ವಯ ಐಎಸ್‍ಐ ಮತ್ತು ಉಗ್ರರು ಕಾಶ್ಮೀರದ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಳ್ಳುವ ಪ್ರಯತ್ನಕ್ಕೆ ಮುಂದಾಗುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಭಿನಂದನ್‍ಗೆ ಹೊಡೆದು, ಗಾಯಗೊಳಿಸಿದ್ದ ಪಾಕ್ ಯೋಧನನ್ನು ಹತ್ಯೆಗೈದ ಭಾರತೀಯ ಸೇನೆ

Share This Article
Leave a Comment

Leave a Reply

Your email address will not be published. Required fields are marked *