ತಿರುಪತಿಗೆ ಹೊರಟವರು ರಾತ್ರಿಯಿಡೀ ಹೆದ್ದಾರಿಯಲ್ಲೇ ಕಾಲಕಳೆದ್ರು..!

Public TV
1 Min Read

ಚಿತ್ರದುರ್ಗ: ನಡು ದಾರಿಯಲ್ಲಿ ಹುಬ್ಬಳ್ಳಿ ತಿರುಪತಿ ಬಸ್ ಕೆಟ್ಟು ನಿಂತಿದ್ದು, ಪ್ರಯಾಣಿಕರು ಕೆಎಸ್‍ಆರ್ ಟಿಸಿಗೆ ಹಿಡಿಶಾಪ ಹಾಕಿದ್ದಾರೆ.

ಧಾರವಾಡ ಡಿಪೋಗೆ ಸೇರಿದ ಏಂ 25 ಈ 3394 ಸಂಖ್ಯೆಯ ವಾಯುವ್ಯ ಸಾರಿಗೆ ಬಸ್ ರಾತ್ರಿ 9.30ಕ್ಕೆ ಚಿತ್ರದುರ್ಗದಿಂದ ತಿರುಪತಿಗೆ ಹೊರಟಿತ್ತು. ಆದರೆ ರಾತ್ರಿ 10 ಗಂಟೆಗೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಬಳಿ ಬಸ್ ಕೆಟ್ಟು ಹೋಗಿತ್ತು.

ಇಂದು ಬೆಳಗ್ಗೆ 6 ಗಂಟೆಗೆ ತಿರುಪತಿ ತಲುಪಬೇಕಿತ್ತು. ಆದರೆ ರಾತ್ರಿ 11 ಗಂಟೆಗೆ ಬಸ್ ಕೆಟ್ಟು ಹೋಗಿದ್ದ ಕಾರಣ ಪ್ರಯಾಣಿಕರು ರಾತ್ರಿಯಿಡೀ ಹೆದ್ದಾರಿಯಲ್ಲೇ ಕಾಲ ಕಳೆಯಬೇಕಿತ್ತು, ಈ ವೇಳೆ ಬಸ್ ಸಿಬ್ಬಂದಿ ಶಿರಾ ಡಿಪೋ ಮ್ಯಾನೇಜರ್ ಅವರನ್ನು ಸಂಪರ್ಕಿಸಿದ್ದರು. ಆದ್ರೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.

ಇದರಿಂದ ಕೋಪಗೊಂಡ ಪ್ರಯಾಣಿಕರು ಕೆಎಸ್‍ಆರ್ ಟಿಸಿಗೆ ಹಿಡಿಶಾಪ ಹಾಕಿದ್ದಾರೆ. ಬಳಿಕ ಬೇರೆ ಬೇರೆ ಬಸ್‍ಗಳಲ್ಲಿ ತಿರುಪತಿಗೆ ಪ್ರಯಾಣ ಬೆಳೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *