చలనచిత్ర రంగంలో అగ్రనటుడిగా,
ప్రజా జీవితంలో జనసేనాని గా,
ఆంధ్రప్రదేశ్ ఉప ముఖ్యమంత్రిగా ప్రజలకు నిరంతర సేవలందిస్తున్న కళ్యాణ్ బాబుకి జన్మదిన శుభాకాంక్షలు.ప్రజా సేవలో నువ్వు చూపుతున్న అంకితభావం చిరస్మరణీయం.
ప్రజలందరి ఆశీస్సులతో, అభిమానంతో నిండునూరేళ్లు ఆయురారోగ్యాలతో ప్రజలకు… pic.twitter.com/13gaXFpWsG— Chiranjeevi Konidela (@KChiruTweets) September 2, 2025
“ಚಲನಚಿತ್ರೋದ್ಯಮದಲ್ಲಿ ಪ್ರಮುಖ ನಟನಾಗಿ, ಸಾರ್ವಜನಿಕ ಜೀವನದಲ್ಲಿ ಜನಸೇನಾ ನಾಯಕನಾಗಿ, ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿ, ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಕಲ್ಯಾಣ್ ಬಾಬು ನಿಮಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಆ ಭಗವಂತ ಆಯುರ್-ಆರೋಗ್ಯ ಕೊಟ್ಟು ಕಾಪಾಡಲಿ” ಎಂದು ಪವನ್ ಕಲ್ಯಾಣ್ಗೆ ಚಿರಂಜೀವಿ ಶುಭ ಹಾರೈಸಿದ್ದಾರೆ.ಇದನ್ನೂ ಓದಿ: Kanchana 4 | ದೆವ್ವವಾಗಿ ಕಾಡಲಿದ್ದಾರೆ ರಶ್ಮಿಕಾ!
ಇನ್ನು ತಮ್ಮ ಸಹೋದರ ಚಿರಂಚೀವಿ ಅವರ ವಿಶ್ ಅನ್ನು ರಿ-ಪೋಸ್ಟ್ ಮಾಡಿರುವ ನಟ ಪವನ್ ಕಲ್ಯಾಣ್. “ನನ್ನ ಹಿರಿಯ ಸಹೋದರ ಪದ್ಮವಿಭೂಷಣ ಶ್ರೀ ಚಿರಂಜೀವಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನ ಅರ್ಪಿಸುತ್ತೇನೆ. ನನ್ನ ಜೀವನದಲ್ಲಿ ನನ್ನ ಮಾರ್ಗದರ್ಶಕ ಮತ್ತು ತಂದೆ ಸಮಾನರಾಗಿದ್ದೀರಿ. ನಿಮ್ಮ ಆಶೀರ್ವಾದ, ಪ್ರೀತಿ ಮತ್ತು ವಾತ್ಸಲ್ಯ ಹಾಗೂ ನಿಮ್ಮ ಶುಭ ಹಾರೈಕೆಗಳು ನನಗೆ ತುಂಬಾ ಸಂತೋಷ ನೀಡಿದೆ. ನೀವು ನನಗೆ ಕಲಿಸಿದ ಸೇವೆಯೇ ಜನ ಪ್ರತಿನಿಧಿಯಾಗಿ ಸೇವೆ ಸಲ್ಲಿಸಲು ಸ್ಫೂರ್ತಿ. ನೀವು ಯಾವಾಗಲೂ ನನಗೆ ಮಾರ್ಗದರ್ಶಕರಾಗಿ ನನ್ನೊಂದಿಗೆ ಇರಬೇಕು” ಎಂದು ಅಣ್ಣನಿಗೆ ಧನ್ಯವಾದವನ್ನ ಹೇಳಿದ್ದಾರೆ ಪವನ್ ಕಲ್ಯಾಣ್.
నా జీవితానికి మార్గదర్శి, తండ్రి సమానులైన అన్నయ్య, పద్మ విభూషణ్ శ్రీ @KChiruTweets గారికి మనస్పూర్తిగా ధన్యవాదాలు తెలియజేస్తున్నాను. మీ ఆశీస్సులు, ప్రేమాభిమానాలు, పుట్టినరోజు శుభాకాంక్షలు ఎంతో ఆనందం కలిగించాయి. సమాజానికి ఏదైనా చేయాలని, మీరు నేర్పిన సేవా గుణమే ఈరోజు @JanaSenaParty… https://t.co/VYRpPj5ZKu
— Pawan Kalyan (@PawanKalyan) September 2, 2025
ಪವನ್ ಕಲ್ಯಾಣ್ಗೆ ಸಿನಿಮಾ ಹಾಗೂ ರಾಜಕೀಯ ರಂಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಂದಹಾಗೆ ಪವನ್ ಕಲ್ಯಾಣ್ ನಟನೆಯ ʻಓಜಿʼ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಇದೇ ಸೆಪ್ಟಂಬರ್ 25ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾತುರದಿಂದ ಕಾಯುತ್ತಿದ್ದಾರೆ.ಇದನ್ನೂ ಓದಿ: ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್