ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಪಾರ್ಥಿವ ಶರೀರ – ವಿದ್ಯಾಪೀಠದಲ್ಲಿ ಪಾಸ್ ಇದ್ದವರಿಗೆ ಮಾತ್ರ ಅನುಮತಿ

Public TV
1 Min Read

ಬೆಂಗಳೂರು: ಇಂದು ಬೆಳಗ್ಗೆ ಕೃಷ್ಣೈಕ್ಯರಾದ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಪಾರ್ಥಿವ ಶರೀರವನ್ನು ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಾರ್ವಜನಿಕ ದರ್ಶಕ್ಕೆ ಇಡಲಾಗಿದೆ.

ಆದಿ ಉಡುಪಿಯಿಂದ ಪಾರ್ಥಿವ ಶರೀರವನ್ನು ಹೊತ್ತುಕೊಂಡು ಬಂದ ವಾಯು ಸೇನಾ ಪಡೆಯ ಹೆಲಿಕಾಪ್ಟರ್ ಮಧ್ಯಾಹ್ನ 3:35ಕ್ಕೆ ಎಚ್‍ಎಎಲ್ ತಲುಪಿತು. ಇಲ್ಲಿಂದ ಅಲಕೃಂತಗೊಂಡ ತೆರೆದ ವಾಹನದಲ್ಲಿ ಮೃತ ಶರೀರವನ್ನು ಬಸವನಗುಡಿಯ ನ್ಯಾಷನಲ್ ಕಾಲೇಜಿನ ಮೈದಾನಕ್ಕೆ ತರಲಾಯಿತು.

ಸಂಜೆ 5:30ರ ವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಬಳಿಕ ಮೆರವಣಿಗೆಯೊಂದಿಗೆ ವಿದ್ಯಾಪೀಠಕ್ಕೆ ತರಲಾಗುತ್ತದೆ. ರಾಘವೇಂದ್ರ, ಕೃಷ್ಣ, ಮದ್ವಚಾರ್ಯರ ಮೂರ್ತಿಗೆ ಪೂಜೆ ಮಾಡಿದ ಬಳಿಕ ಅಂತ್ಯ ಕ್ರಿಯೆ ನಡೆಯಲಿದೆ.

ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿ, ಅವರ ಪೀಠ, ಶ್ರೀ ಕೃಷ್ಣನ ಪೂಜೆಗೆ ಉಪಯೋಗಿಸುತ್ತಿದ್ದ ಪೂಜಾ ಪರಿಕರ ಉಡುಪಿಯಿಂದ ಈಗಾಗಲೇ ಬೆಂಗಳೂರಿಗೆ ಬಂದಿದೆ.

ವಿದ್ಯಾಪೀಠದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಈಗ ಯಾರನ್ನೂ ಒಳಗಡೆ ಬಿಡುತ್ತಿಲ್ಲ. ಗೇಟ್ ಬಳಿಯೇ ಪೊಲೀಸರು ತಡೆಯುತ್ತಿದ್ದು ಪಾಸ್ ಹೊಂದಿರುವ ಭಕ್ತರನ್ನು ಮಾತ್ರ ಒಳಗಡೆ ಬಿಡುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *