ಪೇಜಾವರ ಶ್ರೀಗಳು ಗಂಗಾನದಿ ಬಳಿ ಹೋಗಿಲ್ಲ, ನಾನು ಕರ್ಕೊಂಡು ಹೋಗ್ತಿನಿ: ಕೆ.ಎಸ್.ಈಶ್ವರಪ್ಪ

Public TV
1 Min Read

ಚಿಕ್ಕಮಗಳೂರು: ಪೇಜಾವರ ಶ್ರೀಗಳು ಇತ್ತೀಚೆಗೆ ಗಂಗಾನದಿ ಬಳಿ ಹೋಗಿಲ್ಲ ಅನ್ಸುತ್ತೆ, ಅವಕಾಶ ಸಿಕ್ಕರೆ ನಾನೇ ಅವರನ್ನ ಕರೆದುಕೊಂಡು ಹೋಗುತ್ತೇನೆ ಅಂತಾ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಪೇಜಾವರ ಶ್ರೀಗಳು ಕೇಂದ್ರ ಸರ್ಕಾರದ ಕೆಲಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ರು. ಶ್ರೀಗಳ ಹೇಳಿಕೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ಕಪ್ಪು ಹಣ ಹಾಗೂ ಗಂಗಾ ನದಿ ಮಾಲಿನ್ಯದ ಬಗ್ಗೆ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಈಗ ಗಂಗಾ ನದಿ ಸಾಕಷ್ಟು ಅಭಿವೃದ್ಧಿಯಾಗಿದೆ ಅಂತಾ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ, ಗಂಗಾ ನದಿಯನ್ನು ಶುದ್ಧೀಕರಿಸಲಾಗುವುದು ಭರವಸೆ ನೀಡಿದರು. ಆದರೆ ಅದು ಸಹ ಸಂಪೂರ್ಣವಾಗಿ ಈಡೇರಿಲ್ಲ. :ಪೇಜಾವರ ಶ್ರೀ

ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ಅಧಿಕಾರದಾಹಿಗಳು. ಕರ್ನಾಟಕದಲ್ಲೀಗ ಅವಕಾಶವಾದಿ ರಾಜಕಾರಣ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯನ್ನ ಸೋಲಿಸಲು ಎಲ್ಲರೂ ಒಂದಾಗಿದ್ದಾರೆ. ಇದನ್ನ ದೇಶದ ಜನ ಒಪ್ಪುವುದಿಲ್ಲ, ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದರೆ ಸೋನಿಯಾ-ರಾಹುಲ್ ಕಾರಣ, ಸೋತರೆ ಎಸ್.ಆರ್.ಪಾಟೀಲ್ ಕಾರಣವಾ, ಇದು ಅವಕಾಶವಾದಿ ರಾಜಕಾರಣವಲ್ಲವೇ ಎಂದು ಕಿಡಿಕಾರಿದ್ರು.

Share This Article
Leave a Comment

Leave a Reply

Your email address will not be published. Required fields are marked *