ಸರ್ಕಾರದ ಹಣ ಪೋಲು – ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

Public TV
1 Min Read

ಬೆಳಗಾವಿ: ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಬೆಳಗಾವಿ ನಗರದಲ್ಲಿ ಕಮಾಂಡೆಂಟ್ ಕಂಟ್ರೋಲ್ ಸೆಂಟರ್ ಇಲ್ಲದೆ ಬಸ್ ಶೆಲ್ಟರ್ ಗಳನ್ನು ನಿರ್ಮಾಣ ಮಾಡಿರುವ ಅಧಿಕಾರಿಗಳ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೇಂದ್ರ ಸರ್ಕಾರದ ಮೊದಲ 20 ನಗರಗಳಲ್ಲಿ ಬೆಳಗಾವಿ ಮಹಾನನಗರ ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿ ನಾಲ್ಕು ವರ್ಷ ಕಳೆದರೂ ಕೇವಲ ನಾಲ್ಕೇ ಕಾಮಗಾರಿ ಮಾಡಲಾಗಿದೆ. ಬೆಳಗಾವಿ ನಗರದ ಸ್ಮಾರ್ಟ್ ಸಿಟಿ ಅಧಿಕಾರಿಗಳು ಈ ಯೋಜನೆಯಲ್ಲಿ ಬಸ್ ಶೆಲ್ಟರ್ ಗಳ ನಿರ್ಮಾಣ ಮಾಡಿದ್ದಾರೆ. ಆದರೆ ಸ್ಮಾರ್ಟ್ ಸಿಟಿಯ ಈ ಶೆಲ್ಟರ್ ನಿರ್ಮಾಣ ಮಾಡುವ ಮುನ್ನ ಪ್ರಯಾಣಿಕರಿಗೆ ಬಸ್ ಬರುವ ವೇಳೆ ಹಾಗೂ ನಿಲ್ದಾಣದ ಬಗ್ಗೆ ತಿಳಿಸಬೇಕಿತ್ತು. ಆದರೆ ಆ ವ್ಯವಸ್ಥೆ ಸ್ಮಾರ್ಟ್ ಸಿಟಿ ಬಸ್ ಶೆಲ್ಟರ್ ನಲ್ಲಿ ಇರದಿರುವುದಕ್ಕೆ ಪ್ರಯಾಣಿಕರು ಅಸಮಾಧಾನ ಹೊರಹಾಕಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಧಿಕಾರಿಗಳು ನಿರ್ಮಾಣ ಮಾಡುತ್ತಿರುವ ಬಸ್ ಶೆಲ್ಟರ್ ಗೆ 44.50 ಕೋಟಿ ರೂಪಾಯಿಗಳು ವೆಚ್ಚ ಮಾಡಲಾಗಿದೆ. ವೆಚ್ಚದ ಬಗ್ಗೆ ಮಾತನಾಡುವ ಸ್ಮಾರ್ಟ್ ಸಿಟಿ ಅಧಿಕಾರಿಗಳು ಇಲ್ಲಿ ಪ್ರಯಾಣಿಕರಿಗೆ ಯಾವುದೇ ವ್ಯವಸ್ಥೆ ಮಾಡದೇ ಶೆಲ್ಟರ್ ನಿರ್ಮಾಣ ಮಾಡಿ, ಬೆಳಗಾವಿ ನಗರದ ಅಂದವನ್ನು ಕೆಡಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಕಮಾಂಡೆಂಟ್ ಕಂಟ್ರೋಲ್ ಸೆಂಟರ್ ನಿರ್ಮಾಣಕ್ಕೆ ಬೆಳಗಾವಿ ಸ್ಮಾರ್ಟ್ ಸಿಟಿ ಅಧಿಕಾರಿಗಳು 80.15 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಅದೇ ಕಮಾಂಡೆಂಟ್ ಸೆಂಟರ್ ನಿರ್ಮಾಣ ಮಾಡಲು ಬೇರೆ ಸ್ಮಾರ್ಟ್ ಸಿಟಿಯಲ್ಲಿ 45 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದಾರೆ. ಬೆಳಗಾವಿ ಸ್ಮಾರ್ಟ್ ಸಿಟಿ ಅಧಿಕಾರಿಗಳು ವಿನಾಕಾರಣ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಣವನ್ನು ಪೋಲು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿವೆ.

Share This Article
Leave a Comment

Leave a Reply

Your email address will not be published. Required fields are marked *