ಗೌರಿ ಲಂಕೇಶ್ ಹತ್ಯೆಯನ್ನು ಸಂಭ್ರಮಿಸುತ್ತಿರುವ ಕಿಡಿಗೇಡಿಗಳು

Public TV
0 Min Read

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಕೆಲವು ಕಿಡಿಗೇಡಿಗಳು ಸಂಭ್ರಮಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಗೌರಿ ಹತ್ಯೆಯ ಬಗ್ಗೆ ಪೋಸ್ಟ್ ಹಾಕಿ ಕಿಡಿಗೇಡಿಗಳು ಸಂಭ್ರಮ ಪಡುತ್ತಿದ್ದಾರೆ. ಪೀಡೆ ತೊಲಗಿತು, ನಕ್ಸಲ್ ನಾಯಕಿ ಇನ್ನಿಲ್ಲ, ಒಂದು ಗಂಜಿ ಗಿರಾಕಿ ಹೆಣ ಬಿತ್ತು ಎಂದು ಪೋಸ್ಟ್ ಗಳನ್ನ ಹಾಕಿದ್ದಾರೆ.

ಧರ್ಮಕ್ಕಾಗಿ ಜೀವ ಕೊಡಬೇಕು ಅಂತೇನಿಲ್ಲ. ಧರ್ಮದ ವಿರುದ್ಧ ಹೋರಾಡಿದವರ ಜೀವ ತೆಗೆದರೆ ಆಯ್ತು ಎಂದು ಫೇಸ್‍ಬುಕ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ. ಈ ರೀತಿ ಪೋಸ್ಟ್ ಹಾಕಿದ್ದ ಮಲ್ಲಿ ಅರ್ಜುನ್ ಎಂಬ ವ್ಯಕ್ತಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *