ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶೋತ್ಸವಕ್ಕೆ ಅನುಮತಿ

By
1 Min Read

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವ ಮೂಲಕ ಹುಬ್ಬಳ್ಳಿ ಮಹಾನಗರಪಾಲಿಕೆ ಐತಿಹಾಸಿಕ ನಿರ್ಣಯ ಪ್ರಕಟಿಸಿದೆ.

ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೇಯರ್‌ ಈರೇಶ ಅವರು, ನಗರಪಾಲಿಕೆ ಸಮಿತಿಯ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡೇ ಮಾಡ್ತೀವಿ – ಗುಂಡು ಹಾರಿಸ್ತೀರಾ ಹಾರಿಸಿ: ಮುತಾಲಿಕ್

 

ಒಟ್ಟು 6 ಸಂಘಟನೆಗಳಿಂದ ಗಣೇಶೋತ್ಸವಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು, ಅನುಮತಿ ವಿರೋಧಿಸಿ 11 ಅರ್ಜಿಗಳು ಸಲ್ಲಿಕೆಯಾಗಿದ್ದವು. ಸರ್ವ ಪಕ್ಷಗಳು ಈ ಬಗ್ಗೆ ಸತತವಾಗಿ ಚರ್ಚಿಸಿ ಒಂದು ಅಂತಿಮ ನಿರ್ಣಯ ತೆಗೆದುಕೊಂಡಿದ್ದೆವೆ. ಸರ್ವ ಪಕ್ಷಗಳ ಸಮಿತಿ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ವರದಿ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂಧನ ಸೋರಿಕೆ – ಆರ್ಟೆಮಿಸ್-1 ರಾಕೆಟ್ ಲಾಂಚಿಂಗ್ ಸ್ಥಗಿತ

ಇನ್ನು ಮುಂದೆ ಪ್ರತಿ ವರ್ಷವೂ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುತ್ತದೆ. ಆದರೆ ಮೂರು ದಿನ ಗಣೇಶೋತ್ಸವ ಆಚರಣೆ ಮಾತ್ರ ಇರುತ್ತದೆ. ಮುಂದಿನ ವರ್ಷ ಪರಿಸ್ಥಿತಿ ನೋಡಿಕೊಂಡು ದಿನಗಳನ್ನು ಹೆಚ್ಚಿಗೆ ಮಾಡಲಾಗುತ್ತದೆ ಎಂದು ತಿಳಿಸಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *