ಹೃದಯಾಘಾತವಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ರೈತ ಸಾವು

Public TV
0 Min Read

ಬಳ್ಳಾರಿ: ಹೃದಯಾಘಾತಕ್ಕೆ ಒಳಗಾಗಿದ್ದ ರೈತರೊಬ್ಬರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಹೊಸಪೇಟೆ ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ 48 ವರ್ಷದ ರೈತ ಸುಣಗಾರ ನಾಗರಾಜ ಎಂಬವರು ಜಮೀನಿನಲ್ಲಿ ನೀರು ಹಾಯಿಸುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಸ್ಥಳೀಯರು ಅವರನ್ನು ಮರಿಯಮ್ಮನಹಳ್ಳಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಿಲ್ಲ. ಹೀಗಾಗಿ ಅವರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದ್ರೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ರೈತ ಮೃತಪಟ್ಟಿದ್ದಾರೆ.

ಇದೀಗ ರೈತನ ಸಾವಿಗೆ ಖಾಸಗಿ ಆಸ್ಪತ್ರೆಯ ವೈದ್ಯರೇ ಹೊಣೆಯೆಂದು ಸಂಬಂಧಿಕರು ಹಿಡಿಶಾಪ ಹಾಕುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *