ಎಟಿಎಂನಿಂದ ಹಣ ಡ್ರಾ ಮಾಡಿ ಹೊರಬಂದ ವ್ಯಕ್ತಿ ಅಪಹರಣ!

Public TV
0 Min Read

ಬೆಂಗಳೂರು: ಪೊಲೀಸ್ ಸ್ಟೇಷನ್ ಕೂಗಳತೆ ದೂರದಲ್ಲೇ ವ್ಯಕ್ತಿಯನ್ನು ಅಪಹರಣ ಮಾಡಿರೋ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಮಾರುತಿ ಅಪಹರಣಕ್ಕೊಳಗಾದ ವ್ಯಕ್ತಿ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಮೆಕ್ಯಾನಿಕ್ ಆಗಿ ಮಾರುತಿ ಕೆಲಸ ಮಾಡ್ತಾ ಇದ್ದರು. ಸ್ನೇಹಿತ ಹಣ ಕೇಳಿದ್ದರಿಂದ ಹಣ ಡ್ರಾ ಮಾಡಲೆಂದು ಎಟಿಎಂಗೆ ಹೋಗಿದ್ದರು. ಅಂತೆಯೇ ಹಣ ಡ್ರಾ ಮಾಡಿ ಹೊರ ಬರುತ್ತಿದ್ದಂತೆಯೇ ಕಾರಲ್ಲಿ ಬಂದ ದುಷ್ಕರ್ಮಿಗಳು ಮಾರುತಿ ಅವರನ್ನು ಅಪಹರಣ ಮಾಡಿದ್ದಾರೆ.

ಕಾರಿನಲ್ಲಿ ನಾಲ್ವರು ಅಪಹರಣಕಾರರು ಇದ್ದರು ಎಂಬ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *