ಮಕ್ಕಳಿಗೆ ತಿಂಡಿ ತರುತ್ತಿದ್ದವ ಮನೆ ಮುಂದೆಯೇ ಹೆಣವಾದ!

Public TV
1 Min Read

ಬೆಂಗಳೂರು: ಆಸ್ತಿಗಾಗಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕೊತ್ತನೂರಿನಲ್ಲಿ ನಡೆದಿದೆ.

ನಾಗರಾಜ್ ಹಂತಕರಿಂದ ಹತ್ಯೆಗೊಳಗಾದ ದುರ್ದೈವಿ. ಇವರು ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮಕ್ಕಳಿಗೆ ತಿಂಡಿ ತೆಗೆದುಕೊಂಡು ಮನೆಗೆ ಬಂದಿದ್ದ ಸಂದರ್ಭದಲ್ಲಿ ಮನೆ ಮುಂದೆಯೇ ಹಂತಕರು ಕೊಚ್ಚಿ ಕೊಲೆ ಮಾಡಿದ್ದಾರೆ.


ನಾಗರಾಜ್ ಕೊತ್ತನೂರಿನಲ್ಲಿ ರಿಯಲ್ ಎಸ್ಟೇಟ್ ಬ್ಯುಸ್‍ನೆಸ್ ಎಂದು ಯಾವಾಗಲೂ ಬ್ಯುಸಿಯಾಗಿದ್ದರು. ಹೆಂಡತಿ ಮಕ್ಕಳ ಜೊತೆ ಆರಾಮಾಗೇ ಜೀವನ ಸಾಗಿಸುತ್ತಿದ್ದರು. ಇತ್ತೀಚೆಗೆ ರಾಜಕೀಯವಾಗಿ ಅವರ ಏರಿಯಾದಲ್ಲಿ ಗುರುತಿಸಿಕೊಂಡಿದ್ದು, ಕೊತ್ತನೂರಿನಲ್ಲಿ ಸ್ವಲ್ಪ ಆಸ್ತಿ ಮಾಡಿಕೊಂಡಿದ್ದರು. ಆದರೆ ಹಲವು ವಿವಾದಗಳನ್ನೂ ಮೈಮೇಲೆ ಎಳೆದುಕೊಂಡಿದ್ದರು ಎನ್ನಲಾಗಿದೆ. ನಾಗರಾಜನ ಸೋದರ ಸಂಬಂಧಿಗಳು ಆಗಾಗ ಆಸ್ತಿಯಲ್ಲಿ ಪಾಲು ಕೇಳುತ್ತಾ ಇದ್ದರು. ಆದರೆ ನಾಗರಾಜ್ ಮಾತ್ರ ಪಾಲು ಕೊಡುವುದಕ್ಕೆ ಒಪ್ಪಿರಲಿಲ್ಲ ಎಂದು ಹೇಳಲಾಗಿದೆ.

ನಾಗರಾಜು ಎಂದಿನಂತೆ ಕೆಲಸ ಮುಗಿಸಿ ಬುಧವಾರ ರಾತ್ರಿ ಮನೆಗೆ ಹಿಂದಿರುಗಿದ್ದರು. ಮಕ್ಕಳಿಗಾಗಿ ಬಿಸ್ಕೆಟ್ ಮತ್ತು ಬ್ರೆಡ್ ತೆಗೆದುಕೊಂಡು ಮನೆ ಹತ್ತಿರ ಬಂದಿದ್ದಾರೆ. ಇದೇ ಸಂದರ್ಭದಲ್ಲಿ ಆಸ್ತಿಯ ಜಿದ್ದಿಗೆ ಬಿದ್ದಿದ್ದ ಸಂಬಂಧಿಗಳಾದ ಮನೋಜ್ ಹಾಗೂ ಹರೀಶ್ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ನಾಗರಾಜ್ ಮಾವ ಮುನಿರಾಜು ಹೇಳಿದ್ದಾರೆ.

ಈ ಬಗ್ಗೆ ಕೊತ್ತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇತ್ತ ನಾಗರಾಜ್ ಕುಟುಂಬ ಮಾತ್ರ ಮನೆ ಯಜಮಾನನ್ನು ಕಳೆದುಕೊಂಡು ರೋಧಿಸುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *