ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ

Public TV
0 Min Read

ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿಯಲ್ಲಿ ನಡೆದಿದೆ.

ಬೆಂಗೇರಿಯ ತೋಟಗಾರಿಕೆ ಇಲಾಖೆಯ ಸಂತೆಯಲ್ಲಿ ಈ ಘಟನೆ ನಡೆದಿದೆ. ಸುಮಾರ 35 ರಿಂದ 40 ವಯಸ್ಸಿನ ವ್ಯಕ್ತಿ ಕೊಲೆಗೀಡಾಗಿದ್ದಾರೆ. ಆದ್ರೆ ವ್ಯೆಕ್ತಿಯ ಗುರುತು ಪತ್ತೆಯಾಗಿಲ್ಲ.

ಸ್ಥಳಕ್ಕೆ ಕೇಶ್ವಾಪುರ ಪೊಲೀಸರು ಹಾಗೂ ಶ್ವಾನದಳ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿಯ ಮೈಮೇಲಿನ ರಕ್ತದ ಕಲೆಗಳನ್ನ ಗಮನಿಸಿದ ಪೊಲೀಸರು, ಇಂದು ಬೆಳಗಿನ ಜಾವ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *