ಕುಡಿದ ಮತ್ತಲ್ಲಿ ಅಪರಿಚಿತನಿಂದ ವ್ಯಕ್ತಿಗೆ ಚಾಕು ಇರಿತ

Public TV
1 Min Read

ಬೆಂಗಳೂರು: ಕುಡಿದ ಮತ್ತಿನಲ್ಲಿ ಅಪರಿಚಿತನೊಬ್ಬ ವ್ಯಕ್ತಿಗೆ ಚಾಕು ಇರಿದು ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಟಿ.ಬೇಗೂರಿನ ಭೈರನಹಳ್ಳಿ ಕ್ರಾಸ್ ಬಳಿ ಕಳೆದ ರಾತ್ರಿ ಈ ಘಟನೆ ಸಂಭವಿಸಿದೆ. ಚಾಕು ಇರಿತಕ್ಕೊಳಗಾದ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ಪರಮೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರಮೇಶ್ ತನ್ನ ಸ್ನೇಹಿತರಾದ ನರಸಿಂಹಮೂರ್ತಿ ಹಾಗೂ ಕಿರಣ ಜೊತೆಗೆ ಪಾರ್ಟಿ ಮಾಡಲು ಬಂದ ವೇಳೆ ಘಟನೆ ನಡೆದಿದೆ.

ಭೈರಸಂದ್ರ ಕ್ರಾಸ್ ಬಳಿಯ ಬಾರ್‍ವೊಂದರಲ್ಲಿ ಎಣ್ಣೆ ಪಾರ್ಟಿ ಮಾಡಿ ಹೊರಗಡೆ ಬಂದು ಪರಮೇಶ್ ಮೊಬೈಲ್ ನಲ್ಲಿ ಮಾತಾಡುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿ ಬಂದು ಚಾಕುವಿನಿಂದ ಇರಿದಿದ್ದಾನೆ.

ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *