ಚಿಕ್ಕಪ್ಪನಿಂದಲೇ ಮನೆಗೆ ಪೆಟ್ರೋಲ್ ಬಾಂಬ್ ಎಸೆತ- ದ್ವಿಚಕ್ರವಾಹನ ಭಸ್ಮ

Public TV
1 Min Read

ಚಿತ್ರದುರ್ಗ: ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದ ಪರಿಣಾಮ ಮನೆಯ ಕಾಂಪೌಂಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನ ಭಸ್ಮವಾಗಿರೋ ಘಟನೆ ಚಿತ್ರದುರ್ಗ ನಗರದ ವಿಪಿ ಬಡಾವಣೆಯಲ್ಲಿ ನಡೆದಿದೆ.

ಕ್ಲಾಸ್ ಒನ್ ಕಂಟ್ರಾಕ್ಟರ್ ಆಗಿರುವ ರವಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಒಂದು ಲಕ್ಷ ರೂಪಾಯಿ ಮೌಲ್ಯದ ವೆಸ್ಪ ವಾಹನ ಭಸ್ಮವಾಗಿದೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ರವಿಯವರ ಸ್ವಂತ ಚಿಕ್ಕಪ್ಪನಾಗಿದ್ದ ತಮಿಳುನಾಡುನ ಕಾಂಚಿವರಂ ಮೂಲದ ವಿಠಲ್ ಎಂಬಾತ ಈ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಕೆಇಬಿ ಕ್ವಾಟ್ರರ್ಸ್ ಹಿಂಭಾಗದ ರವಿ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದು ವಿಠಲ್ ಪರಾರಿಯಾಗಿದ್ದಾನೆ. ವಿಠಲ್‍ನ ಎಲ್ಲಾ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *