ತಲ್ವಾರ್‌ನಿಂದ ಕೇಕ್ ಕತ್ತರಿಸಿ ಮಾಜಿ ಸಚಿವರ ಆಪ್ತನ ದರ್ಬಾರ್

Public TV
1 Min Read

ಬೆಂಗಳೂರು: ಮುಸಲ್ಮಾನರ ಪವಿತ್ರ ಈದ್ ಮಿಲಾದ್ ಹಬ್ಬದ ದಿನ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತನೊಬ್ಬ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಮೂಲಕ ಕೇಕ್ ಕತ್ತರಿಸಿ ದರ್ಪ ಮೆರೆದಿದ್ದಾನೆ.

ಭಾನುವಾರ ಮುಸ್ಲಿಮರ ಪವಿತ್ರ ಈದ್ ಮಿಲಾದ್ ಹಬ್ಬವಿತ್ತು, ಜೊತೆಗೆ ಟಿಪ್ಪು ಜಯಂತಿಯನ್ನು ಕೂಡ ಮುಸಲ್ಮಾನರು ಅದ್ಧೂರಿ ಮೆರವಣಿಗೆ ಮೂಲಕ ಆಚರಿಸಿದರು. ಹಾಗೆಯೇ ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ನಗರದಾದ್ಯಂತ ಬಿಗಿ ಪೋಲಿಸ್ ಬಂದೋಬಸ್ತ್ ಒದಗಿಸಲಾಗಿತ್ತು. ಆದರೆ ಈ ನಡುವೆ ಜಮೀರ್ ಅವರ ಆಪ್ತ ವಾಸಿಂ ಬೆಂಬಲಿಗರೊಂದಿಗೆ ಸೇರಿ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಾನೆ. ಇದನ್ನೂ ಓದಿ:ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿ ಮೆರೆದವನನ್ನ ಜೈಲಿಗಟ್ಟಿದ್ರು

ಗೋರಿ ಪಾಳ್ಯದ ಮುಖ್ಯರಸ್ತೆಯಲ್ಲಿ ವಾಸೀಂ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಲ್ಲದೇ ತನ್ನ ಶೌರ್ಯ ಜನರಿಗೆಲ್ಲ ತಿಳಿಯಲಿ ಎಂದು ತನ್ನ ವಾಟ್ಸಾಪ್ ಸ್ಟೇಟಸ್‍ಗೆ ಫೋಟೋ ಹಾಕಿಕೊಂಡು ಬಿಲ್ಡಪ್ ಕೊಟ್ಟಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರವನ್ನ ಬಳಸೋದು ಕಾನೂನು ರೀತಿಯಲ್ಲಿ ಅಪರಾಧ. ಇಷ್ಟೆಲ್ಲಾ ಆದರೂ ಪೊಲೀಸರು ಮಾತ್ರ ಆತನ ವಿರುದ್ಧ ಯಾವ ಕ್ರಮ ಕೈಗೊಂಡಿಲ್ಲ.

Share This Article
Leave a Comment

Leave a Reply

Your email address will not be published. Required fields are marked *