ದಲಿತರ ಓಣಿಯ ಬಾವಿಗೆ ಕ್ರಿಮಿನಾಶಕ ಸಿಂಪಡಿಸಿದ ಕಿಡಿಗೇಡಿಗಳು

Public TV
0 Min Read

 

ಕಲಬುರಗಿ: ದಲಿತರ ಓಣಿಯಲ್ಲಿರುವ ಬಾವಿಗೆ ಕಿಡಿಗೇಡಿಗಳು ಕ್ರಿಮಿನಾಶಕ ಔಷಧಿಯನ್ನು ಸಿಂಪಡಿಸಿದ ಘಟನೆ ಕಲಬುರಗಿ ಜಿಲ್ಲೆಯ ಚೆನ್ನೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಾವಿಗೆ ನೀರು ತರಲು ಹೋದ ವೇಳೆ ಬಾವಿಗೆ ಕ್ರಿಮಿನಾಶಕ ಸೇರಿಸಿರುವುದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಡಿವೈಎಸ್ಪಿ ಎಸ್.ಎಸ್.ಹುನ್ನೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದ ನಡೆದ ಘಟನೆಯ ಮಂಗಳವಾರ ಬೆಳಕಿಗೆ ಬಂದಿದೆ. ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *