ಶಿರಾಳಕೊಪ್ಪ ನಗರದ ಬಿಜೆಪಿ ಅಧ್ಯಕ್ಷ ಮನೆಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ

Public TV
1 Min Read

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಟೌನ್ ಬಿಜೆಪಿ ಅಧ್ಯಕ್ಷ ಮಂಚಿ ಶಿವಾನಂದ ಅವರ ಮನೆಯ ಮೇಲೆ ದುಷ್ಕರ್ಮಿಗಳು ಸೋಮವಾರ ರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ.

ಮಧ್ಯರಾತ್ರಿ ವೇಳೆಗೆ ಬಾಟಲಿಯಲ್ಲಿ ಪೆಟ್ರೋಲ್ ತುಂಬಿ ಬೆಂಕಿ ಹಚ್ಚಿ ಮನೆಯ ಮುಂಭಾಗದಲ್ಲಿ ಎಸೆದಿದ್ದಾರೆ. ಸ್ಫೋಟದ ರಭಸಕ್ಕೆ ಇಡೀ ಗೋಡೆ ಕಪ್ಪಾಗಿದೆ. ಮನೆಯ ಮುಂಭಾಗ ಇದ್ದ ಪ್ಲಾಸ್ಟಿಕ್ ಚೇರ್ ಮತ್ತು ಬಟ್ಟೆಗಳು ಸುಟ್ಟು ಹೋಗಿವೆ. ಘಟನೆಯಲ್ಲಿ ಯಾರಿಗೂ ಯಾವುದೇ ತೊಂದರೆ ಆಗಿಲ್ಲ.

ಎರಡು ದಿನಗಳ ಹಿಂದೆ ಅಕ್ರಮವಾಗಿ ಗೋವುಗಳನ್ನು ಸಾಗಣೆ ಮಾಡುತ್ತಿದ್ದನ್ನು ಶಿವಾನಂದ್ ಮತ್ತು ಇನ್ನಿತರರು ತಡೆದು ಪೊಲೀಸರಿಗೆ ಒಪ್ಪಿಸಿದ್ದರು. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ರಾತ್ರಿಯೇ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *