ಪೆಟ್ರೋಲ್ ಬಂಕ್‍ನಲ್ಲಿ ಪುಂಡ ಯುವಕರಿಂದ ಹಲ್ಲೆ

Public TV
1 Min Read

ಬೆಂಗಳೂರು: ಪೆಟ್ರೋಲ್ ಬಂಕ್‍ನಲ್ಲಿ ಪುಂಡ ಯುವಕರಿಂದ ಡೀಸೆಲ್ ಹಾಕಿಸಿಕೊಳ್ಳಲು ಬಂದಿದ್ದ ಇನ್ನೋವಾ ಕಾರಿನಲ್ಲಿದ್ದವರ ಮೇಲೆ ಹಲ್ಲೆ ಮಾಡಿದ ಘಟನೆ ನಿನ್ನೆ ರಾತ್ರಿ ಆನೇಕಲ್ ತಾಲೂಕಿನ ಗುಡ್ಡನಹಳ್ಳಿಯಲ್ಲಿ ನಡೆದಿದೆ.

ಕಾರಿನಲ್ಲಿದ್ದವರು ಕೆಳಗಿಳಿದು ಡೀಸೆಲ್ ಹಾಕಿಸಿಕೊಳ್ಳುತ್ತಿದ್ದರು. ಇದೇ ಸಂದರ್ಭದಲ್ಲಿ ದ್ವಿಚಕ್ರವಾಹನದಲ್ಲಿ ಬಂದ ಪುಂಡರು ಪೆಟ್ರೋಲ್ ಹಾಕಿಸಿಕೊಂಡಿದ್ದರು. ಪೆಟ್ರೋಲ್ ಹಾಕಿಸಿಕೊಂಡ ಬಳಿಕ ನನ್ನ ಹಣವನ್ನು ನೀನೇ ಕೊಡು ಅಂತ ಇನ್ನೋವಾ ಕಾರಿನನವನ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಹಣ ಕೊಡದೆ ಇದ್ದಾಗ ಕಾರಿನಲ್ಲಿ ಕುಳಿತಿದ್ದ ಇಬ್ಬರ ಮೇಲೆ ಪೆಟ್ರೋಲ್ ಬಂಕ್ ನಲ್ಲಿ ಇದ್ದ ಚಾಕು ತೆಗೆದುಕೊಂಡು ಹಲ್ಲೆ ಎಸಗಿದ್ದಾರೆ. ಹಲ್ಲೆ ನಡೆಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಇದನ್ನೂ ಓದಿ: ಬೆಳಗ್ಗೆ 3-4 ಗಂಟೆಯವರೆಗೆ ನನ್ನ ಮಕ್ಕಳ ಹೋಮ್ ವರ್ಕ್ ಮಾಡಿಸುತ್ತಿದ್ದೆ: ಪ್ರಿಯಾಂಕಾ ಗಾಂಧಿ

ಇತ್ತೀಚೆಗೆ ರಾಜ್ಯದ ಗಡಿಭಾಗದಲ್ಲಿನ ಯುವಕರ ಪುಂಡಾಟ ಹೆಚ್ಚಾಗಿದೆ. ಹೊರರಾಜ್ಯದಿಂದ ಬಂದವರೇ ಇವರ ಗುರಿಯಾಗಿದ್ದಾರೆ. ಇಂತಹ ಪುಂಡ ಪೋಕರಿಗಳು ಹಣಮಾಡಲು ಅಡ್ಡದಾರಿ ಹಿಡಿದಿದ್ದಾರೆ. ತಮಿಳುನಾಡು ಗಡಿ ಮೂಲಕ ಆನೇಕಲ್ಲಿನ ಮೂಲಕ ಬರುವವರನ್ನು ಅಡ್ಡಗಟ್ಟಿ ಹಲ್ಲೆ ನಡೆಸುತ್ತಾರೆ. ನಿರ್ಜನ ಪ್ರದೇಶದ ರಸ್ತೆ ಆಗಿರುವುದರಿಂದ ಇವರ ಕಳ್ಳಾಟ ಹೆಚ್ಚಾಗಿದ್ದು, ಇಂತಹ ಪುಂಡರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರ ಆಗ್ರಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *