ಸಿದ್ದರಾಮಯ್ಯಗೆ ಜೋಡೆತ್ತು ಗುದ್ದು – ಮಾಜಿ ಸಿಎಂ ಬೆನ್ನಿಗೆ ನಿಂತ ಡಿಕೆಶಿ

Public TV
2 Min Read

-ಸಿಎಂ ಪರಿಹಾರ ನಿಧಿಗೆ 50 ಲಕ್ಷ

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆನ್ನಿಗೆ ನಿಂತಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಡಿಕೆಶಿ, ಯಾವ ಫೋನ್ ಕೂಡ ಟ್ಯಾಪಿಂಗ್ ಆಗಿಲ್ಲ. ಮಾಧ್ಯಮಗಳಿಗೆ ಅದು ಹೇಗೆ ಸಿಗ್ತೋ ಗೊತ್ತಿಲ್ಲ. ನಾನು ಇದರ ಬಗ್ಗೆ ವಿಚಾರಿಸಿದ್ದೇನೆ. ಸಿಎಂ ಇದರ ಬಗ್ಗೆ ಯಾವ ತನಿಖೆ ಬೇಕಾದರೂ ಮಾಡಲಿ ಎಂದು ಹೇಳಿದ್ದಾರೆ.

ಫೋನ್ ಟ್ಯಾಪಿಂಗ್ ಬಗ್ಗೆ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪ ಮಾಡಿದ್ದಾರೆ. ಹಿಂದಿನ ಗೃಹ ಸಚಿವರಿಗೆ ರಾಜಕಾರಣ ಬೇಕಾಗಿದೆ. ಹಾಗಾಗಿ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ನಮ್ಮ ಮೇಲೆಲ್ಲ ರೇಡ್ ಗಳು ನಡೆದಿದೆ. ಆಗ ನಮ್ಮ ಮೇಲೆ ಸುಖಾಸುಮ್ಮನೆ ಟ್ಯಾಪಿಂಗ್ ಮಾಡಿದ್ರಾ ಎಂದು ಪ್ರಶ್ನಿಸಿದ್ದಾರೆ. ಅವರು ಏನೇನು ಮಾಡಿದ್ದಾರೆ ಅನ್ನೋದು ಗೊತ್ತಿದೆ, ಏನ್ ಬೇಕೋ ಮಾಡಲಿ, ಹೇಳಲಿ. ಬಿಜೆಪಿಯವರು ನಮ್ಮ ಫೋನ್ ಕದ್ದಾಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಿನ್ನೆ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಫೋನ್ ಟ್ಯಾಪಿಂಗ್‍ನಂತಹ ಗಂಭೀರ ಆರೋಪ ಕೇಳಿ ಬಂದಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದರು.

ಕಿಸಾನ್ ಸಮ್ಮಾನ್ ಯೋಜನೆಯ ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಸರ್ಕಾರ ಚಿಂತನೆ ನಡೆಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬದ್ಧತೆಯಿಂದ ಈ ಯೋಜನೆ ತಂದಿದ್ದಾರೆ. ನಮ್ಮ ಹಳೆಯ ಯೋಜನೆ ಕೈ ಬಿಟ್ಟರೆ ಸರಿಯಲ್ಲ. ರದ್ದು ಪಡಿಸುವುದನ್ನ ಮಾಡಬಾರದು. ನಮ್ಮ ಯೋಜನೆಗೆ ಬಗ್ಗೆ ನಮಗೆ ಬದ್ಧತೆಯಿದೆ. ದ್ವೇಷದ ರಾಜಕಾರಣ ಮಾಡಲ್ಲ ಎಂದು ಸಿಎಂ ಹೇಳಿದ್ದಾರೆ. ಅದರಂತೆ ಅವರು ನಡೆದುಕೊಳ್ಳಬೇಕು. ನಮ್ಮ ಕಾರ್ಯಕ್ರಮ ತೆಗೆದರೆ ನಾವು ಸುಮ್ಮನಿರಲ್ಲ. ಅದರ ಬಗ್ಗೆ ವಿಸ್ತೃತ ಹೋರಾಟ ರೂಪಿಸಬೇಕಾಗುತ್ತದೆ ಎಂದು ಇದೇ ವೇಳೆ ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಇದೆ. ಕೊಡಗು, ಮಲೆನಾಡು, ಉತ್ತರಕರ್ನಾಟಕದಲ್ಲಿ ಪ್ರವಾಹ ಆಗಿದೆ. ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಿಎಂ ಪ್ರತಿ ಮನೆಗೆ 5 ಸಾವಿರ ಕೊಡ್ತೇನೆ, 5 ಲಕ್ಷ ಕೊಡ್ತೇನೆ ಎಂದು ಘೋಷಿಸಿದ್ದಾರೆ. ಅವರು ಹೇಳಿದಂತೆ ನಡೆದುಕೊಳ್ಳಲಿ. ಇದೀಗ ದೆಹಲಿಗೆ ಹೋಗಿದ್ದಾರೆ. ಅಲ್ಲಿಂದ ಎಷ್ಟು ಗಿಫ್ಟ್ ತರ್ತಾರೆ ನೊಡೋಣ. ನಾನು 50 ಲಕ್ಷ ಸಿಎಂ ಪರಿಹಾರ ನಿಧಿಗೆ ಕೊಡುತ್ತೇನೆ ಎಂದರು.

ಕೆಪಿಸಿಸಿ ಅಧ್ಯಕ್ಷರು, ಪದಾಧಿಕಾರಿಗಳ ನೇಮಕವನ್ನ ನಮ್ಮ ಹಿರಿಯ ನಾಯಕರು ನೋಡಿಕೊಳ್ಳುತ್ತಾರೆ. ನಾನು ಸೀನಿಯರ್ ಅಲ್ಲ, ನಾನೊಬ್ಬ ಜೂನಿಯರ್ ಶಾಸಕ. ಈಗ ಜನರ ಕೆಲಸ ಮಾಡೋಕೆ ಬಿಟ್ಟರೆ ಸಾಕು. ನನಗೆ ಯಾವ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಬೇಡ. ಪ್ರಸ್ತುತ ಇರುವವರಿಗೆ ನಾನು ಸಹಕಾರ ಕೊಡ್ತೇನೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *