ಜೈಲಿನಲ್ಲಿ ಸತ್ಯೇಂದ್ರ ಜೈನ್‍ಗೆ ಮಾಡಿದ್ದು ಮಸಾಜ್ ಅಲ್ಲ, ಫಿಸಿಯೋಥೆರಪಿ – ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು

Public TV
2 Min Read

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ (Aam Aadmi Party) ಸಚಿವ ಸತ್ಯೇಂದ್ರ ಜೈನ್‍ಗೆ (Satyendar Jain) ತಿಹಾರ್ ಜೈಲಿನಲ್ಲಿ ವಿಐಪಿ ಟ್ರೀಟ್‍ಮೆಂಟ್ ನೀಡಲಾಗುತ್ತಿದೆ ಎಂದು ಇತ್ತೀಚೆಷ್ಟೇ ಬಿಜೆಪಿ ಆರೋಪಿಸಿತ್ತು. ಇದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು, ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ಫಿಸಿಯೋಥೆರಪಿ (Physiotherapy) ಮಾಡಲಾಗುತ್ತಿತ್ತೋ ಹೊರತು ಮಸಾಜ್ ಅಲ್ಲ ಎಂದು ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ್ದಾರೆ.

ವಡೋದ್ರಾದಲ್ಲಿ (Vadodra) ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿ ಅವರು ಸತ್ಯೇಂದ್ರ ಜೈನ್ ಅವರಿಗೆ ಜೈಲಿನಲ್ಲಿ ಮಸಾಜ್ ಮತ್ತು ವಿಐಪಿ ಟ್ರೀಟ್‍ಮೆಂಟ್ ನೀಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಮಸಾಜ್ ಅಲ್ಲ ಕೇವಲ ಫಿಸಿಯೋಥೆರಪಿ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಗುರಿ- ಮಂಗಳೂರು ಸ್ಫೋಟಕ್ಕೆ ಬೆಂಗಳೂರು ಲಿಂಕ್

ಇದೇ ವೇಳೆ ಗುಜರಾತ್‍ನಲ್ಲಿ (Gujrat) ವಿಐಪಿ ಟ್ರೀಟ್‍ಮೆಂಟ್ ಪಡೆದವರು ಗೃಹ ಸಚಿವ ಅಮಿತ್ ಶಾ (Amit Shah) ಎಂದು ಆರೋಪಿಸಿದ ಅವರು, ಅಮಿತ್ ಶಾ ಅವರು ಗುಜರಾತ್‍ನಲ್ಲಿ ಸಚಿವರಾಗಿದ್ದಾಗ ಜೈಲಿನಲ್ಲಿ ವಿಐಪಿ ಟ್ರೀಟ್‍ಮೆಂಟ್ ಪಡೆದರು, ಆದರೆ ಸತ್ಯೇಂದ್ರ ಜೈನ್‍ಗೆ ಅಂತಹದ್ದೇನೂ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್‌ಗೆ ಮಸಾಜ್, ವಿಐಪಿ ಸೌಕರ್ಯ – ವೀಡಿಯೋ ಬಿಡುಗಡೆ

ಶನಿವಾರ ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ವ್ಯಕ್ತಿಯೊಬ್ಬರು ಮಸಾಜ್ ಮಾಡುತ್ತಿರುವ ಹಳೆಯ ವೀಡಿಯೊವನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಜೈನ್‍ಗೆ ವಿಐಪಿ ಸೌಕರ್ಯ ನೀಡಿರುವ ಆರೋಪದ ಮೇಲೆ ಕೆಲ ದಿನಗಳ ಹಿಂದೆ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *