ತುಂಬಿ ಹರಿಯುತ್ತಿದ್ದ ಸೇತುವೆಯಲ್ಲೇ ಪಿಕಪ್ ಚಾಲನೆ!

Public TV
1 Min Read

ಮಂಗಳೂರು: ದಕ್ಷಿಣ ಕನ್ನಡ (Rain In Dakshina Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳ ನದಿಗಳೆಲ್ಲ ತುಂಬಿ ಹರಿಯುತ್ತಿವೆ. ಈ ನಡುವೆ ಚಾಲಕನೊಬ್ಬ ತುಂಬಿ ಹರಿಯುತ್ತಿದ್ದ ಸೇತುವೆ ಮೇಲೆ ಪಿಕಪ್ ಚಲಾಯಿಸಿ ಫಜೀತಿಗೆ ಸಿಲುಕಿದ ಪ್ರಸಂಗ ನಡೆದಿದೆ.

ಈ ಘಟನೆ ದ.ಕ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಕೆದಿಲದಲ್ಲಿ ನಡೆದಿದೆ. ಕೆದಿಲ ಕಾಂತುಕೋಡಿ ಮುಳುಗು ಸೇತುವೆಯಲ್ಲಿ ಚಾಲಕ ಪಿಕಪ್ (Pickup Vehicle) ಚಲಾಯಿಸಿ ನಡು ನೀರಿನಲ್ಲಿ ಸಿಲುಕಿಕೊಂಡಿದ್ದಾನೆ. ಕೂಡಲೇ ಎಚ್ಚೆತ್ತ ಸ್ಥಳೀಯರು ವಾಹನದಲ್ಲಿದ್ದವರ ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕಪ್ ಚಾಲಕ ತಮ್ಮ ವಾಹನವನ್ನು ಚಲಾಯಿಸಿದ್ದಾನೆ. ಆದರೆ ನೀರು ಹೆಚ್ಚಾಗಿ ಸೇತುವೆಯ ಮಧ್ಯ ಭಾಗದಲ್ಲಿ ಸಿಲುಕಿಕೊಂಡಿದೆ. ತಕ್ಷಣ ಸ್ಥಳೀಯರು ಅದರೊಳಗಡೆ ಸಿಲುಕಿದವವರನ್ನು ರಕ್ಷಣೆ ಮಾಡಿದ್ದಾರೆ. ಪ್ರತೀ ವರ್ಷ ಮಳೆ ಬಂದಾಗ ಈ ಸೇತುವೆ ಮುಳುಗಡೆಯಾಗುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್