ಶಾಲಾ ಛಾವಣಿಯ ಮರದ ತುಂಡು ಬಿದ್ದು ಇಬ್ಬರ ವಿದ್ಯಾರ್ಥಿಗಳಿಗೆ ಗಾಯ

Public TV
1 Min Read

ದಾವಣಗೆರೆ: ಶಾಲಾ ಛಾವಣಿಗೆ ಹಾಕಿದ್ದ ಮರದ ತುಂಡು ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ಹರಪನಹಳ್ಳಿ ತಾಲೂಕಿನ ಕಣಿವಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಣಿವಿಹಳ್ಳಿ ಗ್ರಾಮದ ಪೂಜಾರ ಮಂಜುನಾಥ್ ಮತ್ತು ಕೋಟೆಪ್ಪ ಗಾಯಗೊಂಡ ವಿದ್ಯಾರ್ಥಿಗಳು. ಬುಧವಾರ ಸಂಜೆ ಜೋರಾಗಿ ಗಾಳಿ ಬೀಸಿದ ಪರಿಣಾಮ ಹಂಚಿನ ಕೊಠಡಿಯ ಛಾವಣಿಗೆ ಹಾಕಿದ್ದ ಮರದ ತುಂಡು ಕೆಳಗೆ ಬಿದ್ದಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಹರಪನಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾದೆ.

ಶಾಲಾ ಕೊಠಡಿಗಳು ಸಂಪೂರ್ಣವಾಗಿ ಹಾಳಾಗಿದ್ದು, ಮಕ್ಕಳು ಪ್ರಾಣ ಭೀತಿಯಿಂದ ಕಲಿಯುವಂತಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಕೊಠಡಿಗಳು ಇಂತಹ ಪರಿಸ್ಥಿತಿಯಲ್ಲಿವೆ.

Share This Article
Leave a Comment

Leave a Reply

Your email address will not be published. Required fields are marked *