ಪಾರಿವಾಳ ವಿಚಾರ ಕೊಲೆಯಲ್ಲಿ ಅಂತ್ಯ

Public TV
1 Min Read

ಮೈಸೂರು: ಪಾರಿವಾಳ ವಿಚಾರದಲ್ಲಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಕೆ.ಆರ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಣ್ಣದಕೇರಿಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಗೋವಿಂದರಾಜ್ ಎಂದು ಗುರುತಿಸಲಾಗಿದೆ. ಸಂಕ್ರಾಂತಿ ಹಬ್ಬದ ರಾತ್ರಿಯಂದು ಉಲ್ಲಾಸ್ ಎಂಬಾತನ 38 ಪಾರಿವಾಳಗಳು ಕಳ್ಳತನವಾಗಿತ್ತು. ಉಲ್ಲಾಸ್ ಕೊಲೆಯಾದ ಗೋವಿಂದರಾಜು ಪುತ್ರ. ಇವರ ಎದುರು ಮನೆಯಲ್ಲಿದ್ದ ವಿನಾಯಕ್, ಪ್ರಮೋದ್‍ನಾಯಕ್, ಜಯಶಂಕರ್, ಮನೋಜ್‍ನಾಯಕ್, ವಿಜಯ್ ಪಾರಿವಾಳ ಕದ್ದಿದ್ದಾರೆಂದು ಆರೋಪಿಸಲಾಗಿತ್ತು. ನಿನ್ನೆ ವಿನಾಯಕ್ ಮನೆಯಲ್ಲಿ ಪಾರಿವಾಳಗಳಿರಬಹುದೆಂದು ಪರಿಶೀಲನೆ ಮಾಡಲು ಉಲ್ಲಾಸ್ ಸ್ನೇಹಿತ ಪ್ರಮೋದ್ ತೆರಳಿದ್ದ. ಈ ವೇಳೆ ಪ್ರಮೋದ್ ಮೇಲೆ ವಿನಾಯಕ್, ಜಯಶಂಕರ್, ಪ್ರಮೋದ್‍ನಾಯಕ್, ಮನೋಜ್‍ನಾಯಕ್ ಹಲ್ಲೆ ಮಾಡಿದ್ದರು. ಇದನ್ನೂ ಓದಿ: ಸ್ನೇಹಿತನಿಗೆ ಇಕ್ಕಳದಿಂದ ಹೊಡೆದು, ಮೆಟ್ಟಿಲಿನಿಂದ ತಳ್ಳಿ ಕೊಂದ

ಪ್ರಮೋದ್ ಮೇಲೆ ಹಲ್ಲೆ ನಡೆಸಿದ್ದನ್ನು ಉಲ್ಲಾಸ್ ತಂದೆ ಕೊಲೆಯಾದ ಗೋವಿಂದರಾಜು ಪ್ರಶ್ನಿಸಿದ್ದಾರೆ. ನಂತರ ಗೋವಿಂದರಾಜು ಮನೆ ಬಳಿ ಬಂದ ನಾಲ್ವರು, ಗೋವಿಂದರಾಜು ಮತ್ತು ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಗೋವಿಂದರಾಜುರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೆ ಗೋವಿಂದರಾಜು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸ್ನಾನದ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್‍ಮೇಲ್ ಮಾಡುತ್ತಾ ಅತ್ತಿಗೆಯನ್ನೇ ರೇಪ್ ಮಾಡ್ದ!

ಕೆ.ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಸಂಬಂಧ ಆರೋಪಿಗಳಾದ ಮನೋಜ್‍ನಾಯಕ್ ಹಾಗೂ ಜಯಶಂಕರ್‌ನನ್ನು ಬಂಧಿಸಲಾಗಿದ್ದು ವಿನಾಯಕ್, ಪ್ರಮೋದ್‍ನಾಯಕ್ ಇಬ್ಬರು ಪರಾರಿಯಾಗಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ಸಮಾರಂಭಕ್ಕೆ ನುಗ್ಗಿ ಯುವಕನನ್ನ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು!

Share This Article
Leave a Comment

Leave a Reply

Your email address will not be published. Required fields are marked *