ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು

Public TV
1 Min Read

ಚಿಕ್ಕಮಗಳೂರು: ಒಡಿಶಾ ತ್ರಿವಳಿ ರೈಲು ದುರಂತದಲ್ಲಿ (Odisha Train Tragedy) ಸುಮೇದ್ ಸಿಖರ್ಜಿ ಯಾತ್ರೆಗೆಂದು ಹೊರಟಿದ್ದ 110 ಯಾತ್ರಿಕರು ಬದುಕುಳಿದಿದ್ದು, ಈ ಪೈಕಿ ಒಬ್ಬ ಯಾತ್ರಿಕ (Pilgrim) ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಳಸ (Kalasa) ತಾಲೂಕಿನ ಕಳಕೋಡು ನಿವಾಸಿ ಧರ್ಮಪಾಲಯ್ಯ (72) ಮೃತ ದುರ್ದೈವಿ. ಇವರು ಸೇರಿದಂತೆ 110 ಯಾತ್ರಿಕರು ಸುಮೇದ್ ಸಿಖರ್ಜಿ ಯಾತ್ರೆಗೆಂದು ಬೆಂಗಳೂರಿನಿಂದ ರೈಲಿನಲ್ಲಿ ಹೊರಟ್ಟಿದ್ದರು. ಒಡಿಶಾದಲ್ಲಿ ತ್ರಿವಳಿ ರೈಲು ದುರಂತ ನಡೆದ ಸಂದರ್ಭದಲ್ಲಿ ಯಾತ್ರೆಗೆ ತೆರಳುತ್ತಿದ್ದ ಈ 110 ಕನ್ನಡಿಗರೂ ಬದುಕುಳಿದಿದ್ದರು. ಇದನ್ನೂ ಓದಿ: ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟ ಹಣ್ಣು ತಿಂದು ಯುವತಿ ಸಾವು!

ಬಳಿಕ ಸುಮೇದ್ ಸಿಖರ್ಜಿ ಯಾತ್ರೆಗೆ ತೆರಳಿದ ಅವರು, ಯಾತ್ರೆ ಮುಗಿಸಿ ಹಿಂದಿರುಗುವಾಗ ಉತ್ತರ ಪ್ರದೇಶದ (Uttar Pradesh) ಮಿರ್ಜಾಪುರ (Mirzapur) ರೈಲ್ವೇ ಸ್ಟೇಷನ್‌ನಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಶವ ಪರೀಕ್ಷೆಗಾಗಿ ಅವರ ಸಂಬಂಧಿಕರು ಮಿರ್ಜಾಪುರ ಸರ್ಕಾರಿ ಆಸ್ಪತ್ರೆ ಬಳಿ ಕಾಯುತ್ತಿದ್ದಾರೆ. ಇದನ್ನೂ ಓದಿ: ಪ್ರೇಯಸಿಯನ್ನು ಕೊಂದು ಟ್ಯಾಂಕ್‌ನಲ್ಲಿ ಬಚ್ಚಿಟ್ಟ ಭೂಪ ಅಂಧರ್

Share This Article